ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ ಮತ್ತು 7 ಮೋರ್ಛಾಗಳ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ 6 ಆಪ್ತರಿಗೆ ಸ್ಥಾನ ನೀಡಲಾಗಿದೆ.
ಹೀಗಾಗಿ ಇದಕ್ಕೆ ಅಪಸ್ವರಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸದಾನಂದಗೌಡ ಹೈಕಮಾಂಡ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಬೆಂಗಳೂರು, (ಡಿಸೆಂಬರ್ 24): ಬಿವೈ ವಿಜಯೇಂದ್ರ (BY Vijayendra) ಅವರು ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿ(BJP) ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಆದ್ರೆ, ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ (BS Yediyurappa) 6 ಆಪ್ತರಿಗೆ ಸ್ಥಾನ ನೀಡಲಾಗಿದ್ದು, ಇದು ಇತರೆ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ಸಂಸದ ಸದಾನಂದಗೌಡ ಪ್ರತಿಕ್ರಿಯಿಸಿ, ಈ ತಂಡವನ್ನು ಅಸಮರ್ಥ ತಂಡ ಅಂತಾ ಹೇಳಲ್ಲ. ಆದರೆ ಅಲ್ಲೋ ಇಲ್ಲೋ ಸ್ವಲ್ಪ ವ್ಯತ್ಯಾಸಗಳು ಇವೆ. ಇದನ್ನೆಲ್ಲ ಮಾಡುವ ಮುನ್ನ ಕೇಂದ್ರದ ನಾಯಕರು ಬಂದು ರಾಜ್ಯದ ಹಿರಿಯರ ಜೊತೆ ಕುಳಿತು ತಿಳಿದುಕೊಳ್ಳಬೇಕಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.
ಈ ತಂಡ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋದರೆ ಖಂಡಿತ ಯಶಸ್ವಿಯಾಗುತ್ತದೆ. ಮತ್ತೆ ಏನಾದರೂ ಹಳೆಯ ಚಾಳಿ ಮುಂದುವರಿಸಿದರೆ ಅದು ಪಕ್ಷದ ಮೇಲೆ ಸಮಸ್ಯೆ ಆಗುತ್ತದೆ. ದಕ್ಷಿಣ ಭಾಗಕ್ಕೆ ಹೆಚ್ಚು ಆದ್ಯತೆ ಸಿಕ್ಕಿದೆ, ಉತ್ತರ ಭಾಗಕ್ಕೆ ಸರಿಯಾಗಿ ಸಿಕ್ಕಿಲ್ಲ ಎಂಬ ಮಾತುಗಳು ಇವೆ. ಈ ತಂಡವನ್ನು ಅಸಮರ್ಥ ತಂಡ ಅಂತಾ ಹೇಳಲ್ಲ. ಆದರೆ ಅಲ್ಲೋ ಇಲ್ಲೋ ಸ್ವಲ್ಪ ವ್ಯತ್ಯಾಸಗಳು ಇವೆ. ಇದನ್ನೆಲ್ಲ ಮಾಡುವ ಮುನ್ನ ಕೇಂದ್ರದ ನಾಯಕರು ಬಂದು ರಾಜ್ಯದ ಹಿರಿಯರ ಜೊತೆ ಕುಳಿತು ತಿಳಿದುಕೊಳ್ಳಬೇಕಿತ್ತು. ಅವರಿಂದ ಹೊಸ ವಿಷಯ ತೆಗೆದುಕೊಂಡು ತಂಡವನ್ನು ಮಾಡಬೇಕಿತ್ತು ಎಂದಿದ್ದಾರೆ.
Laxmi News 24×7