Breaking News

ಸಿದ್ದರಾಮಯ್ಯನವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಪೇಜಾವರ ಶ್ರೀಗಳು

Spread the love

ಬೆಳಗಾವಿ, ಡಿ.23 : ಹಿಜಾಬ್ ವಾಪಾಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ( Siddaramaiah )ನವರ ಹೇಳಿಕೆ ವಿಚಾರ ‘ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವುದರಿಂದಸಮಾಜದಲ್ಲಿದೊಡ್ಡ ಕ್ಷೋಭೆ(ಅಲ್ಲೋಲ-ಕಲ್ಲೋಲ) ಉಂಟಾಗುತ್ತದೆ ಎಂದು ವಿಶ್ವ ಪ್ರಸನ್ನ ತೀರ್ಥ ಪೇಜಾವರ ಶ್ರೀಗಳು( Vishwa Prasanna Theertha Swamij ) ಹೇಳಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಕಾನೂನು ಮಾಡಲಿ ಅದು ಸಮಾಜದಲ್ಲಿ ಒಂದು ಪಂಗಡವನ್ನ ಗುರಿಯಾಗಿರಿಸಿಕೊಂಡು ಮಾಡುವುದು ಸರಿಯಲ್ಲ ಎಂದು ಹೇಳಿದರು.

ಯಾವುದೇ ಒಂದು ಪಂಗಡದ ಸಿಎಂ ಅವರಲ್ಲ

ಕರ್ನಾಟಕದ ಎಲ್ಲರ ಮುಖ್ಯಮಂತ್ರಿ ಅವರು ಆಗಿದ್ದಾರೆ ಹೊರತು ಯಾವುದೇ ಒಂದು ಪಂಗಡದ ಸಿಎಂ ಅಲ್ಲ. ಇಂತಹ ನಡುವಳಿಕೆ ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ. ಮೊನ್ನೆ ಪರೀಕ್ಷೆ ಬರೆಯುವಾಗ ಹಿಂದೂಗಳಾದವರು ಕಾಲುಂಗರ, ತಾಳಿ ತಗೆಯಬೇಕು ಒಂದು ಕಡೆ ಹೀಗೆ, ಮತ್ತೊಂದು ಪಂಗಡದವರಿಗೆ ಮುಸುಕು ದಾರಿಗಳು ಆಗಿ ಹೋಗಬಹುದು ಎನ್ನುತ್ತಾರೆ. ಇದನ್ನ ಯಾರು ಮಾಡಬಾರದು, ಇವರಂತೂ ಖಂಡಿತವಾಗಿ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ