Breaking News
DNA Infection. Concept. 3D Render

ರಾಜ್ಯದಲ್ಲಿ ಇಂದು 125 ಜನರಿಗೆ ಕೊರೊನಾ ಸೋಂಕು

Spread the love

ಬೆಂಗಳೂರು-1, ದಕ್ಷಿಣ ಕನ್ನಡ-1, ಹಾಸನ ಜಿಲ್ಲೆಯಲ್ಲಿ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇನ್ನು ಬೆಂಗಳೂರಿನಲ್ಲಿಯೇ ಇಂದು 94 ಜನರಲ್ಲಿಕೊರೊನಾ ಸೋಂಕುಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್​ಗಳ ಸಂಖ್ಯೆ 436 ಕ್ಕೆ ಏರಿಕೆಯಾಗಿದೆ. ಜೊತೆಗೆ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 3.96ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಕೊರೊನಾ ಸೋಂಕು ಪತ್ತೆ

ಇನ್ನು ರಾಜ್ಯದಲ್ಲಿಂದು 125 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದಕ್ಷಿಣ ಕನ್ನಡ-5, ಹಾಸನ-5, ಮೈಸೂರು-13, ಶಿವಮೊಗ್ಗ-2, ವಿಜಯಪುರ-2, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ವೈರಸ್​ ಪತ್ತೆಯಾಗಿದೆ.

ನಿನ್ನೆ ಇದ್ದ ಕೊರೊನಾ ಕೇಸ್​

ಇನ್ನು ನಿನ್ನೆ ರಾಜ್ಯದಲ್ಲಿ ಇಂದು 106 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಬೆಳಕಿಗೆ ಬಂದಿತ್ತು. ಅದರಲ್ಲಿ ಬೆಂಗಳೂರಿನಲ್ಲಿಯೇ ಬರೊಬ್ಬರಿ 95 ಜನರಿಗೆ ಹರಡಿತ್ತು. ಇನ್ನುಳಿದಂತೆ ಮೈಸೂರು 6, ದಕ್ಷಿಣ ಕನ್ನಡ ಇಬ್ಬರಿಗೆ ಹಾಗೂ ಮಂಡ್ಯ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ಕಂಡುಬಂದಿತ್ತು. ಆ ಮೂಲಕ ಕರ್ನಾಟಕದಲ್ಲಿ 344 ಕೊರೊನಾ ಸಕ್ರಿಯ ಕೇಸ್​ಗಳಿತ್ತು. ಜೊತೆಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿ ರೇಟ್ ಶೇಕಡಾ 7.35ರಷ್ಟಿತ್ತು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿತ್ತು


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ