Breaking News

ರೈತರ ಅವಹೇಳನ – ಶಿವಾನಂದ ಪಾಟೀಲ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

Spread the love

ಬೆಳಗಾವಿ : ರೈತರ (Farmers) ಬಗ್ಗೆ ಅವಹೇಳನಕಾರಿ ಹೇಳಿಕೆ (Controvercial statement) ನೀಡಿದ ಹಿನ್ನೆಲೆಯಲ್ಲಿ ಸಚಿವ ಶಿವಾನಂದ ಪಾಟೀಲ್‌ (Shivanand patil) ಅವರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ (Protest) ನಡೆಸಿರುವ ಘಟನೆ ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ಬಳಿ ನಡೆದಿದೆ.

ಕಾರ್ಖಾನೆ ಬಳಿಯಿರುವ ಸಚಿವರ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ರೈತರು, ಸಚಿವರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಜೊತೆಗೆ ಸಚಿವರ ವಿರುದ್ದ ಘೋಷಣೆ ಕೂಗಿದರು.

ಭಾಷಣವೊಂದರಲ್ಲಿ ಮಾತನಾಡುತ್ತಾ ಸಚಿವ ಶಿವಾನಂದ ಪಾಟೀಲ್‌, ಬರ ಬಂದರೆ ಪರಿಹಾರ ಸಿಗುತ್ತದೆ. ಹೀಗಾಗಿ ರೈತರು ಬರ ಎಂದರೆ ಇಷ್ಟಪಡುತ್ತಾರೆ ಎಂದು ಹೇಳಿಕೆ ನೀಡಿದ್ದರು. ವಿವಾದ ಹೆಚ್ಚಾಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿದ್ದ ಶಿವಾನಂದ ಪಾಟೀಲ್‌ ತಮ್ಮ ಹೇಳಿಕೆ ಹಿಂಪಡೆಯಲು ನಿರಾಕರಿಸಿದ್ದರು. ಈ ಹಿಂದೆಯೂ ಶಿವಾನಂದ ಪಾಟೀಲ್‌ ರೈತರು ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೀನಾಯವಾಗಿ ಹೇಳಿಕೆ ನೀಡಿದ್ದರು.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಚಿವರ ಕಚೇರಿಗೆ ಪೊಲೀಸ್‌ ಭದ್ರತೆ ಒದಗಿಸಲಾಗಿದೆ


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ