Breaking News
Home / Uncategorized / ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ; ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರಲ್ಲವೇ?

ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ; ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರಲ್ಲವೇ?

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅದನ್ನು ಸತ್ಯ ಮಾಡುವ ಕಲೆ ತಮಗೆ ಚೆನ್ನಾಗಿ ಕರಗತವಾಗಿದೆ. ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರಲ್ಲವೇ? ಎಂದು ಪ್ರಶ್ನಿಸಿದ್ದಾರೆ. 15ನೇ ಹಣಕಾಸು ಆಯೋಗ ತನ್ನ 2020-21ರ ಮಧ್ಯಂತರ ವರದಿಯಲ್ಲಿ ಕರ್ನಾಟಕಕ್ಕೆ 5495 ಕೋಟಿ ರೂ.

ಶಿಫಾರಸು ಮಾಡಿದ್ದುದು ನಿಜ. ಆದರೆ 2021-22 ರಿಂದ 2025-26ರವರೆಗಿನ ತನ್ನ ಅಂತಿಮ ವರದಿಯಲ್ಲಿ ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೆ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ. ಇದು ಸತ್ಯಾಂಶ. ತಾವು ಹೇಳಿರುವುದು ಅರ್ಧ ಸತ್ಯವೆಂದು ತಮಗೂ ಗೊತ್ತು.

ಅಲ್ಲವೇ? ಎಂದಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ನಂತರದ ಪರಿಸ್ಥಿತಿಯಲ್ಲಿ ಆರ್ಥಿಕ ಪುನಶ್ಚೇತನಕ್ಕಾಗಿ 2020-21ನೇ ಹಣಕಾಸು ವರ್ಷದಿಂದ ಈವರೆಗೆ ಕರ್ನಾಟಕಕ್ಕೆ 6561.91 ಕೋಟಿ ರೂ. ಮೊತ್ತವನ್ನು 50 ವರ್ಷಗಳ ಬಡ್ಡಿ ರಹಿತ ಸಾಲವಾಗಿ ಕರ್ನಾಟಕಕ್ಕೆ ನೀಡಲಾಗಿದೆ.


Spread the love

About Laxminews 24x7

Check Also

ಚನ್ನಮ್ಮನ ಕಿತ್ತೂರು: ಬರಿದಾದ ಕಲಭಾಂವಿ ಹೊಸಕೆರೆಯ ಒಡಲು

Spread the love ಚನ್ನಮ್ಮನ ಕಿತ್ತೂರು: ಕೆಲವು ವರ್ಷಗಳ ಹಿಂದೆ ತನ್ನೊಡಲು ತುಂಬಿಕೊಂಡು ಊರ ಪ್ರವೇಶ ದ್ವಾರದಲ್ಲೇ ಕೈಬೀಸಿ ಆಮಂತ್ರಣ ನೀಡುತ್ತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ