Breaking News

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ

Spread the love

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
(Education minister Madhu Bangarappa) ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ನಿನ್ನೆ ಬುಧವಾರ ಮಧ್ಯರಾತ್ರಿ ಸುಮಾರಿಗೆ ಅಪಘಾತವಾಗಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಬಚಾವ್ ಆಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದ್ದು ಬದಲಿ ವಾಹನ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ.

Spread the love

About Laxminews 24x7

Check Also

ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ಪ್ರಕರಣ: 11 ಪೊಲೀಸರಿಗೆ ಗಾಯ

Spread the love ಬೆಳಗಾವಿ: ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ