ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದರಿಂದ ತೀವ್ರ ಸುಸ್ತಾಗಿದ್ದರು. ಹೀಗಾಗಿ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ: ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬೀರಾವರ ಗ್ರಾಮದಲ್ಲಿ ನಡೆದಿದೆ.
ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದರಿಂದ ತೀವ್ರ ಸುಸ್ತಾಗಿದ್ದರು. ಹೀಗಾಗಿ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೀರಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ ಅನ್ನ ಸಾಂಬಾರ್ ಊಟ ಮಾಡಿದ್ದರು. ಸುಮಾರು 60 ಮಕ್ಕಳಿಗೆ ವಾಂತಿ, ಭೇದಿಯಾಗಿ ಅಸ್ವಸ್ಥರಾಗಿದ್ದಾರೆ.
ಇನ್ನು ಕೆಲ ಮಕ್ಕಳಿಗೆ ಮೂಗಿನಲ್ಲಿ ರಕ್ತಸ್ರಾವವಾಗಿದೆ. ಹೀಗಾಗಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.