Breaking News
Home / ರಾಜಕೀಯ / ಕನ್ನಡಪರ ಹೋರಾಟಗಾರರ ಬಿಡುಗಡೆ ಮಾಡದಿದ್ದರೆ ಕ್ರಾಂತಿಕಾರಿ ಹೋರಾಟ: ಕರವೇ ಪ್ರವೀಣ್ ಶೆಟ್ಟಿ ಎಚ್ಚರಿಕೆ

ಕನ್ನಡಪರ ಹೋರಾಟಗಾರರ ಬಿಡುಗಡೆ ಮಾಡದಿದ್ದರೆ ಕ್ರಾಂತಿಕಾರಿ ಹೋರಾಟ: ಕರವೇ ಪ್ರವೀಣ್ ಶೆಟ್ಟಿ ಎಚ್ಚರಿಕೆ

Spread the love

ಬೆಂಗಳೂರು:ಕೂಡಲೇ ಹೋರಾಟಗಾರರನ್ನು ಬಿಡುಗಡೆ ಮಾಡನಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲವಾದರೆ, ಕ್ರಾಂತಿಕಾರಕ ಹೋರಾಟವನ್ನು ಸರ್ಕಾರ ಎದುರಿಸಬೇಕಾಗಲಿದೆ.ಇಲ್ಲವಾದರೆ ರಾಜಧಾನಿ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಕ್ರಾಂತಿಕಾರಿ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ಪ್ರವೀಣ್ ಕುಮಾರ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

 

ನಿನ್ನೆ ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ಪ್ರತಿಭಟನೆ ಮೆರವಣಿಗೆ ಮಾಡಿದ್ದ ಕರವೇ ಕಾರ್ಯಕರ್ತರು ಇಂಗ್ಲಿಷ್ ಬರಹ ಇದ್ದ ಬೋರ್ಡ್ ಗಳನ್ನು ಹರಿದು ಹಾಕಿದ್ದರು.ಪ್ರತಿಭಟನೆ ಜೋರಾಗಿ ಕಲ್ಲು ತೂರಾಟ ನಡೆದಿತ್ತು.ಹಾಗಾಗಿ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.

ಈಗ ನಾರಾಯಣ ಗೌಡ ಬಂಧನದಿಂದ ಕರವೇ ಕಾರ್ಯಕರ್ತರು ಕೆರಳಿದ್ದು ರಾಜ್ಯಾದ್ಯಂತ ಹೋರಾಟ ಮಾಡಲಿದ್ದಾರೆ ಎನ್ನಲಾಗಿದೆ. ಸಿಎಂ ಮನೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ.ಇನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಬಿಗಿ ಬಂದೊಬಸ್ತ್ ನೀಡಲಾಗಿದೆ.

ಅವರನ್ನು ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ಮಾಡಲಾಗುತ್ತಿದೆ.

ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ JMFC ಕೋರ್ಟ್ ಜಡ್ಜ್ ಕರವೇ ಕಾರ್ಯಕರ್ತರಿಗೆ ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ