Breaking News

ಸುಳ್ಳು ಸುದ್ದಿಯಿಂದ ಗ್ಯಾಸ್ ಎಜೆನ್ಸಿಗಳ ಮುಂದೆ ಜನಜಂಗುಳಿ

Spread the love

ಕೊಪ್ಪಳ, ಡಿ.28: ಡಿಸೆಂಬರ್ 31 ರೊಳಗೆ ಗ್ಯಾಸ್ ಸಂಪರ್ಕ್ ಪಡೆದವರೆಲ್ಲರೂ ನಿಮಗೆ ಸೇವೆ ನೀಡುವ ಗ್ಯಾಸ್ ಏಜೆನ್ಸಿಯವರ ಬಳಿ ಹೋಗಿ ಇ ಕೆವೈಸಿ ಮಾಡಿಸಬೇಕು. ಇಲ್ಲದಿದ್ದರೆ ನಿಮ್ಮ ಸಬ್ಸಿಡಿ(Subsidy) ಹಣ ಬಂದಾಗುತ್ತದೆ. ಕೆವೈಸಿ ಮಾಡಿಸಿದ್ರೆ ನಿಮಗೆ ಕೇವಲ ಐನೂರು ರೂಪಾಯಿಗೆ ಸಿಲಿಂಡರ್ ಸಿಗುತ್ತೆ.ಇಲ್ಲದಿದ್ದರೆ, ಕಮರ್ಷಿಯಲ್ ಸಿಲಿಂಡರ್ ಬೆಲೆ ನೀಡಿ ಸಿಲಿಂಡರ್ ಖರೀದಿಸಬೇಕು ಎನ್ನುವ ವದಂತಿಯನ್ನು ಹಬ್ಬಿಸಿದ್ದಾರೆ. ಈ ಹಿನ್ನಲೆ ಕೊಪ್ಪಳ(Koppala) ನಗರ ಸೇರಿದಂತೆ ರಾಜ್ಯದ ವಿವಿಧ ಗ್ಯಾಸ್ ಏಜೆನ್ಸಿಗಳ ಅಂಗಡಿಗಳ ಮುಂದೆ ನೂರಾರು ಜನ ಕ್ಯೂ ನಿಲ್ಲುತ್ತಿದ್ದಾರೆ. ಬೆಳ್ಳೆಂಬೆಳಗ್ಗೆ ಆರು ಗಂಟೆಗೆ ತಮ್ಮ ಬೇರೆ ಕೆಲಸಗಳನ್ನು ಕೂಡ ಬಿಟ್ಟು, ಗ್ಯಾಸ್ ಅಂಗಡಿ ಮುಂದೆ ಬಂದು ಕಾಯುತ್ತಿದ್ದಾರೆ.

 

ಈ ವದಂತಿ ಬಾಯಿಂದ ಬಾಯಿಗೆ ಅನೇಕರಿಗೆ ಹಬ್ಬಿದ್ರೆ, ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಹರದಾಡುತ್ತಿರುವ ವದಂತಿಯನ್ನು ನಂಬಿ, ತಾವು ಗ್ಯಾಸ್ ಸಂಪರ್ಕ ಪಡಿದಿರುವ ಏಜೆನ್ಸಿಗಳ ಮುಂದೆ ಬಂದು ಇ ಕೆವೈಸಿ ಮಾಡಲು ಮುಗಿಬೀಳುತ್ತಿದ್ದಾರೆ. ಇನ್ನು ದಿಢೀರನೆ ನೂರಾರು ಜನ ಬರುತ್ತಿರುವುದರಿಂದ ಏಜೆನ್ಸಿಗಳ ಅಂಗಡಿಗಳು ಜನರಿಂದ ತುಂಬಿ ತುಳಕುತ್ತಿವೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ