Breaking News

ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌

Spread the love

ಬೆಂಗಳೂರು: ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (kalladka prabhakar bhat) ವಿರುದ್ಧ ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ (High Court)​ ಸೂಚಿಸಿದೆ.

 

ತಮ್ಮ ವಿರುದ್ಧ ಎಫ್​ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಕಲ್ಲಡ್ಕ ಪ್ರಭಾಕರ್ ಭಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಶ್ ರೈ ಅವರು, ಕಲ್ಲಡ್ಕ ಪ್ರಭಾಕರ್‌ಗೆ ತಾತ್ಕಾಲಿಕ ರಿಲೀಫ್‌ ನೀಡಿದ್ದಾರೆ. ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚಿಸಿದ್ದಾರೆ.

ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಇದನ್ನು ರದ್ದುಗೊಳಿಸುವಂತೆ ಸೂಚಿಸಬೇಕೆಂದು ಹೈಕೋರ್ಟ್​ಗೆ ಕಲ್ಲಡ್ಕ ಪ್ರಭಾಕರ್ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದರು.


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ