Breaking News

ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷ

Spread the love

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಕೆಲಕಾಲ ಆತಂಕ ಸೃಷ್ಟಿಸಿತ್ತು.

ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದ ಬೈಪಾಸ್ ಬಳಿ ಎಲ್‍ಎಲ್‍ಸಿ ಕಾಲುವೆ ಇದೆ. ನಿನ್ನೆ ರಾತ್ರಿ ಕಾಲುವೆಯಿಂದ ಮೊಸಳೆಯು ಸಚಿವರ ನಿವಾಸದ ಮುಂಭಾಗದ ರಸ್ತೆಗೆ ಬಂದಿತ್ತು.ಮೊಸಳೆ ಇರುವ ಮಾಹಿತಿ ಅರಿತ ಕಮಲಾಪುರದ ಅಟಲ್ ವಾಜಪೇಯಿ ಝೂಲಾಜಿಕಲ್ ಪಾರ್ಕ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ನಂತರ ಮೊಸಳೆ ಝೂಲಾಜಿಕಲ್ ಪಾರ್ಕ್‍ಗೆ ಕೊಂಡೊಯ್ದಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ