Breaking News

ಇಂದಿನ ಯುವ ಜನಾಂಗ ಕುವೆಂಪು ಬರಹಗಳನ್ನು ಓದಬೇಕು – ಸಿಎಂ

Spread the love

ಬೆಂಗಳೂರು: ರಾಷ್ಟ್ರಕವಿ ಕುವೆಂಪು (Kuvempu) ಅವರ ಜನ್ಮದಿನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಮೈಕ್ರೋ ಬ್ಲಾಗಿಂಗ್‌ ತಾಣ ಎಕ್ಸ್‌ (X) ನಲ್ಲಿ ಸಿಎಂ ಸಿದ್ದರಾಮಯ್ಯ ಸಂದೇಶ ಹಂಚಿಕೊಂಡಿದ್ದಾರೆ.

 

ಜಾತಿ, ಧರ್ಮ,ಪಂಥಗಳ ಎಲ್ಲೆಗಳನ್ನು ಮೀರಿ ‘ವಿಶ್ವಮಾನವ’ನಾಗುವ ಮೂಲಕವೇ ಸಮ ಸಮಾಜ ನಿರ್ಮಾಣ ಸಾಧ್ಯ ಎಂಬ ಸಂದೇಶವನ್ನು ಸಾಹಿತ್ಯ ಮತ್ತು ಬದುಕಿನ ಮೂಲಕ ತೋರಿಸಿಕೊಟ್ಟವರು ರಾಷ್ಟ್ರ ಕವಿ ಕುವೆಂಪುರವರು. ಕುವೆಂಪು‌ ಅವರಲ್ಲಿ ಓರ್ವ ಗುರು, ದಾರ್ಶನಿಕ, ಸಮಾಜ ಸುಧಾರಕನನ್ನು ಕಂಡಿದ್ದೇನೆ. ಅವರ ಬರಹಗಳನ್ನು ಇಂದಿನ ಯುವ ಜನಾಂಗ ಓದಿ ವಿಶ್ವಮಾನವರಾಗಬೇಕು ಎಂದು ಸಿಎಂ ಹೇಳಿದ್ದಾರೆ.

ಜಗದ ಕವಿ – ಯುಗದ ಕವಿಗೆ ನನ್ನ ಕೋಟಿ ನಮನಗಳು ಎಂದು ಸಿಎಂ ಸಿದ್ದರಾಮಯ್ಯ ಗೌರವ ಸಲ್ಲಿಸಿದ್ದಾರೆ.

ಡಿ. 29 ನ್ನು ರಾಜ್ಯದಲ್ಲಿ ವಿಶ್ವಮಾನವ ದಿನ ಎಂದು ಆಚರಿಸಲಾಗುತ್ತದೆ.


Spread the love

About Laxminews 24x7

Check Also

ಇನ್ನೂ ಎರಡು ದಿನ ಮಹಾಮಳೆ

Spread the loveಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ (ಜು.7) ಜೋರು ಗಾಳಿ ಸಹಿತ ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ