Breaking News

ಮಹಾರಾಷ್ಟ್ರದ 48 ಕ್ಷೇತ್ರಗಳಲ್ಲಿ ಶಿವಸಂಕಲ್ಪ ಅಭಿಯಾನ: ಸಿಎಂ ಏಕನಾಥ್‌ ಶಿಂಧೆ

Spread the love

ಮುಂಬರುವ ಲೋಕಸಬಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಶಿವಸಂಕಲ್ಪ ಅಭಿಯಾನವನ್ನು ಘೋಷಿಸಿದ್ದಾರೆ. ಮುಂಬೈ: ಮುಂಬರುವ ಲೋಕಸಬಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಶಿವಸಂಕಲ್ಪ ಅಭಿಯಾನವನ್ನು ಘೋಷಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ‘ಶಿವಸಂಕಲ್ಪ ಅಭಿಯಾನ’ದ ಭಾಗವಾಗಿ ರಾಜ್ಯದ 48 ಕ್ಷೇತ್ರಗಳಲ್ಲಿ ಪ್ರವಾಸ ಮಾಡುವುದಾಗಿ ಘೋಷಿಸುವ ಮೂಲಕ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಗುರುವಾರ ಚಾಲನೆ ನೀಡಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಿಂದೆ, 2024ರ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವಂತೆ ಮನವಿ ಮಾಡಿದರು. 2024ರ ಮೊದಲಾರ್ಧದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುವಂತೆ ಹೇಳಿದರು.ಶಿವಸೇನೆ (ಏಕನಾಥ ಶಿಂದೆ ಬಣ), ಭಾರತೀಯ ಜನತಾ ಪಕ್ಷ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್ಸಿಪಿ) ಅಜಿತ್ ಪವಾರ್ ಬಣವನ್ನು ಒಳಗೊಂಡಿರುವ ಆಡಳಿತಾರೂಢ ಮೈತ್ರಿಕೂಟ ಅಥವಾ ‘ಮಹಾಯುತಿ’ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

Spread the love

About Laxminews 24x7

Check Also

ಕಾಲ್ತುಳಿತದಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಕ್ರಿಕೆಟ್ ಟೂರ್ನಿ ನಡೆಸಬೇಕು ಎಂದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

Spread the loveಬೆಂಗಳೂರು: ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸುವುದು ಪರಿಹಾರವಲ್ಲ ಎಂದು ಮಾಜಿ ಕ್ರಿಕೆಟಿಗ ಅನಿಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ