Breaking News

ಮಣಿಕಂಠ ರಾಠೋಡ್‌ ಸೋದರನ ರೈಸ್‌ಮಿಲ್‌ನಿಂದ 700 ಕ್ವಿಂಟಾಲ್‌ ಅಕ್ಕಿ ವಶಕ್ಕೆ!

Spread the love

ಯಾದಗಿರಿ : ಶಹಾಪುರದಲ್ಲಿನ ಪಡಿತರ ಅಕ್ಕಿ (Ration rice)ಕಳ್ಳತನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್(Manikanth Rathod) ಸೋದರನಿಗೆ ಸೇರಿದ್ದ ರೈಸ್ ಮಿಲ್‌ನಿಂದ 700 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

ಗುರುಮಠಕಲ್‌ನಲ್ಲಿರುವ ಲಕ್ಷ್ಮೀ ವೆಂಕಟೇಶ್ವರ್‌ ರೈಸ್‌ಮಿಲ್‌ ಮೇಲೆ ಸುರಪುರ ಡಿವೈಎಸ್‌ಪಿ ಜಾವೇದ್ ಇನಾಮ್ದಾರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು 630 ಕ್ವಿಂಟಾಲ್ ಪಾಲಿಶ್ ಮಾಡಿರೋ ಪಡಿತರ ಅಕ್ಕಿಯ ಜೊತೆಗೆ ಪಾಲಿಶ್ ಮಾಡಲು ರೆಡಿ ಮಾಡಿಟ್ಟುಕೊಂಡಿದ್ದ 70 ಕ್ವಿಂಟಾಲ್ ಅಕ್ಕಿ ಒಟ್ಟೂ 700 ಕ್ವಿಂಟಾಲ್‌ ಅಕ್ಕಿಯನ್ನು ವಶಕ್ಕೆಪಡೆಯಲಾಗಿದೆ.

ಪ್ರಕರಣದಲ್ಲಿ ಬಂಧಿತ ಆರೋಪಿಗಳು ಪಡಿತರ ಅಕ್ಕಿಯನ್ನು ರಾಜು ರಾಠೋಡ್‌ಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದರು. ಸದ್ಯ ರಾಜು ರಾಠೋಡ್‌ ತಲೆಮರೆಸಿಕೊಂಡಿದ್ದು ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ