Breaking News

ತೇರದಾಳದ ಘಟನೆ ಬಿಜೆಪಿಯ ಸಂಸ್ಕೃತಿಯನ್ನ ತೋರಿಸುತ್ತೆ. ಪೊಲೀಸರ ಸಮ್ಮುಖದಲ್ಲಿ ಹೆಣ್ಣುಮಗಳನ್ನು ಎಳೆದಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಕ್ರೋಶ

Spread the love

ಬೆಂಗಳೂರು: ತೇರದಾಳದ ಘಟನೆ ಬಿಜೆಪಿಯ ಸಂಸ್ಕೃತಿಯನ್ನ ತೋರಿಸುತ್ತೆ. ಪೊಲೀಸರ ಸಮ್ಮುಖದಲ್ಲಿ ಹೆಣ್ಣುಮಗಳನ್ನು ಎಳೆದಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಹೆಣ್ಣು ಮಗಳನ್ನ ಎಳೆದಾಡಿದ್ದಾರೆ. ಈ ಘಟನೆ ಸರಿಯೋ ತಪ್ಪೋ ಅನ್ನೋದನ್ನ ಮುಖ್ಯಮಂತ್ರಿಗಳಿಗೆ ಬಿಟ್ಟು ಬಿಡುತ್ತೇನೆ. ಈ ಪ್ರಕರಣವನ್ನ ಗಂಭೀರವಾಗಿ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬೇರೆ ಪ್ರಕರಣದಲ್ಲಿ ಪೊಲೀಸರು ಕೇಸ್ ಹಾಕ್ತಾರೆ. ಆದರೆ ಈ ಪ್ರಕರಣದಲ್ಲಿ ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇತ್ತೀಚಿನ ದಿನಗಳಲ್ಲಿ ಯಾರಿಗೆ ಏನು ಬೇಕಾದರೂ ಮಾಡಬಹುದು ಎಂಬುದು ಬಿಜೆಪಿಗೆ ಅಭ್ಯಾಸ ಮತ್ತು ಹವ್ಯಾಸವಾಗಿದೆ. ಲೀಡರ್, ಶಾಸಕರು ಯಾರ ಕಂಟ್ರೋಲ್‍ನಲ್ಲಿ ಇಲ್ಲ ಕಾರ್ಪೋರೇಟ್ ಕೌನ್ಸಿಲರ್ ಎಲ್ಲಾ ಕಡೆ ನಡೆಯುತ್ತದೆ. ಪೊಲೀಸರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ. ನಾವು ಅದೇನು ಮಾಡುತ್ತಾರೆ ಅನ್ನೋದನ್ನು ನೋಡುತ್ತೇನೆ. ಈ ಕುರಿತಾಗಿ ನಾನು ಹೆಚ್ಚು ಮಾತನಾಡುವುದಿಲ್ಲ. ಅದೇನು ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ನೋಡಿ ಮಾತನಾಡುತ್ತೇನೆ ಎಂದು ಗರಂ ಆದರು.


Spread the love

About Laxminews 24x7

Check Also

‌ಫಾರಿನ್‌ ಸೀರೆ, ವಜ್ರಾಭರಣದ ಗಿಫ್ಟ್ ಆಸೆ ಮಹಿಳೆಗೆ 1.75 ಕೋಟಿ ನಾಮ

Spread the loveಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ  ಪರಿಚಯವಾದ ವ್ಯಕ್ತಿಯೊಬ್ಬನ ಮಾತು ನಂಬಿ ಯಶವಂತಪುರದ ಮಹಿಳೆಯೊಬ್ಬರು ದುಬಾರಿ ಸೀರೆ ಹಾಗೂ ವಜ್ರಾಭರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ