ರಾಜ್ಯದ ನೂರಾರು ಚಿತ್ರಮಂದಿರಗಳಲ್ಲಿ ‘ಕಾಟೇರ‘ ಸಿನಿಮಾ (Kaatera Movie) ಸದ್ದು ಮಾಡುತ್ತಿದೆ. ನಟ ದರ್ಶನ್ (Darshan) ಅವರ ಅಭಿನಯಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ನಿರ್ದೇಶಕ ತರುಣ್ ಸುಧೀರ್ ಅವರು ಈ ಸಿನಿಮಾದಲ್ಲಿ ಸಾಮಾಜಿಕ ಸಂದೇಶ ನೀಡಿದ್ದಾರೆ. ಜನ ಸಾಮಾನ್ಯರು ಮಾತ್ರವಲ್ಲದೇ ರಾಜಕಾರಣಿಗಳು ಕೂಡ ‘ಕಾಟೇರ’ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕೂಡ ಇಂದು (ಡಿ.31) ‘ಕಾಟೇರ’ ಸಿನಿಮಾ ವೀಕ್ಷಿಸಿ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈ ಚಿತ್ರ ಅವರಿಗೆ ತುಂಬ ಇಷ್ಟವಾಗಿದೆ.
ಹುಬ್ಬಳ್ಳಿಯಲ್ಲಿ ಪ್ರಲ್ಹಾದ್ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಸಾಥ್ ನೀಡಿದ್ದಾರೆ. ದರ್ಶನ್ ಅವರ ನಟನೆ, ಸಿನಿಮಾದಲ್ಲಿನ ಸಂದೇಶ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಲ್ಹಾದ್ ಜೋಶಿ ಅವರು ಹೊಗಳಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ದರ್ಶನ್ ಫ್ಯಾನ್ಸ್ ಖುಷಿ ಆಗಿದ್ದಾರೆ.