Breaking News

ಅಪಘಾತದಲ್ಲಿ ಮೃತಪಟ್ಟ 3 ಕುಟುಂಬಗಳಿಗೆ ತಲಾ 1 ಕೋಟಿ ಪರಿಹಾರ

Spread the love

ಬೆಂಗಳೂರು : ಅಪಘಾತದಲ್ಲಿ ಮೃತಪಟ್ಟ ಮೂರು ಕುಟುಂಬಕ್ಕೆ KSRTC ಪರಿಹಾರ ನೀಡಿದೆ. ಮೂರು ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 1 ಕೋಟಿ ರೂಪಾಯಿ ಪರಿಹಾರದ ಚೆಕ್‌ ವಿತರಿಸಿದ್ದಾರೆ. ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆ ಅಡಿ ಪರಿಹಾರ ನೀಡಿದ್ದಾರೆ.

ಚಾಲಕರಾದ ಬಿ.ಎಂ.ಪುಟ್ಟಸ್ವಾಮಿ, ಅಶೋಕ್‌ ಕುಮಾರ್‌ ಚಾಲಕ ಕಂ ನಿರ್ವಾಹಕ ರಮೇಶ ಜಿ. ಕುಟುಂಬಕ್ಕೆ ಪರಿಹಾರ ನೀಡಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಮನೆಯ ಸದಸ್ಯನನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ, ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು ನಾವು ಮಾಡುತ್ತಿದ್ದೇವೆ. ಕೋಟಿ ಹಣದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು‌ ನಡೆಸಬಹುದಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ