Breaking News

ಬೆಳಗಾವಿ: ವರದಕ್ಷಿಣೆ ನೀಡಿಲ್ಲವೆಂದು ವಧುವಿಗೆ ತಾಳಿ ಕಟ್ಟದ ವರ ಅರೆಸ್ಟ್

Spread the love

ಬೆಳಗಾವಿ, ಜ.1: ತಾಳಿ ಕಟ್ಟುವ ಸಮಯದಲ್ಲಿ ಮದುವೆ ‌ಮುರಿದು ಬಿದ್ದ ಘಟನೆಬೆಳಗಾವಿ (Belagavi)ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹಳೆ ಹುಬ್ಬಳ್ಳಿ ನಿವಾಸಿ ವರ ಸಚಿನ್ ಪಾಟೀಲ್ ಎಂಬವನೊಂದಿಗೆ ಯುವತಿಯೊಬ್ಬಳ ಮದುವೆ ನಿಶ್ಚಯವಾಗಿತ್ತು. ಖಾನಾಪುರ ಪಟ್ಟಣದ ಲೋಕಮಾನ್ಯ ಕಲ್ಯಾಣ ಮಂಟಪ ಕೂಡ ಬುಕ್ ಮಾಡಲಾಗಿತ್ತು. 2023ರ ಡಿಸೆಂಬರ್ 30 ರಂದು ನಡೆದ ಮದುವೆ ನಿಶ್ಚಿತಾರ್ಥ ಸಂದರ್ಭದಲ್ಲಿ 100 ಗ್ರಾಂ ಚಿನ್ನ,‌ 10 ಲಕ್ಷ ವರದಕ್ಷಿಣೆ ನೀಡುವ ಮಾತುಕತೆ ನಡೆದಿತ್ತು.

 

ಆದರೆ, ‌ವರದಕ್ಷಿಣೆ ನೀಡದ ಹಿನ್ನೆಲೆಯಲ್ಲಿ ತಾಳಿ ಕಟ್ಟಲು ವರ ಸಚಿನ್ ಒಲ್ಲೆ ಎಂದಿದ್ದಾನೆ. ಇದರಿಂದ ಬೆಸತ್ತ ವಧುವಿನ ಕುಟುಂಬಸ್ಥರು ಖಾನಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವರನ ವಿರುದ್ಧ ವಧು ನೀಡಿದ ದೂರಿನ ಅನ್ವಯ ಪೊಲೀಸರು, ಸಚಿನ್​ ಪಾಟೀಲ್​ನನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.


Spread the love

About Laxminews 24x7

Check Also

ಫೆ.8ರಿಂದ ರಾಷ್ಟ್ರಮಟ್ಟದ ವಿಚಾರ ಸಂಕಿರಣ

Spread the loveಬೆಳಗಾವಿ:ನಗರದ ಕೆಎಲ್‌ಎಸ್ ಗೊಗಟೆ ಕಾಲೇಜಿನ ಕೆ.ಕೆ.ವೇಣುಗೋಪಾಲ ಸಭಾಂಗಣದಲ್ಲಿ ಫೆ.8ರಿಂದ 13ರ ವರಗೆ ಅಕಾಡೆಮಿ ಆಫ್ ಕಂಪೇರೆಟಿವ್ ಫಿಲಾಸಫಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ