Breaking News

ರಾಮ ಮಂದಿರ ಉದ್ಘಾಟನೆಗೆ ಯಾರಿಗೆ ಆಹ್ವಾನ ಕೊಟ್ಟಿದ್ದಾರೆ ಅವರು ಹೋಗಲಿ,:C.M.

Spread the love

ಕೊಪ್ಪಳ: ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ಯಾರಿಗೆ ಆಹ್ವಾನ ಕೊಟ್ಟಿದ್ದಾರೆ, ಯಾರಿಗೆ ಬಿಟ್ಟಿದ್ದಾರೆಂದು ನನಗೆ ಗೊತ್ತಿಲ್ಲ. ಯಾರಿಗೆ ಕೊಟ್ಟಿದ್ದಾರೊ ಅವರು ಹೋಗಲಿ, ಯಾರಿಗೆ ಬಿಡುತ್ತಾರೋ ಬಿಡಲಿ. ಯಾರಿಗೆ ಆಹ್ವಾನ ಕೊಡುತ್ತಾರೆಂದು ಅವರಿಗೆ ಸೇರಿದ್ದು ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

 

ಜ.22 ಸರ್ಕಾರಿ ರಜೆ ಘೋಷಣೆ ಮಾಡುವ ವಿಚಾರವಾಗಿ ಮಾತನಾಡಿ, ಅಯೋಧ್ಯಾ ರಾಮ ಮಂದಿರ ಉದ್ಘಾಟನೆ ಕೇಂದ್ರ ಸರ್ಕಾರ ಮಾಡುತ್ತದೆ. ಅವರು ಬೇಕಾದರೆ ರಜೆ ಮಾಡಲಿ ಎಂದರು.

ಹುಬ್ಬಳ್ಳಿಯ ಕರ ಸೇವಕರ ಬಂಧನ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತಪ್ಪು ಮಾಡಿದವರನ್ನು ಏನು ಮಾಡಬೇಕು? ಅವರನ್ನು ಸುಮ್ನೆ ಬಿಟ್ಟು ಬಿಡಬೇಕಾ? ಹಳೆಯ ಕೇಸ್ ಗಳನ್ನು ವಿಲೇವಾರಿ ಮಾಡಿ ಎಂದಿದ್ದೇವೆ. ಹಳೆಯ ಕೇಸ್ ನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಾವು ಯಾವುದೇ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಸ್ಪಷ್ಟ ಪಡಿಸಿದರು.


Spread the love

About Laxminews 24x7

Check Also

ಪ್ರಿಯತಮೆ ಹಿಂದೂ… ನಾನು ಮುಸ್ಲಿಂ ಆಗಿ ಹುಟ್ಟಿದ್ದೇ ತಪ್ಪಾ? – ಸಂಜೀತ್ ಆಲಿ ಡೆತ್ ನೋಟ್

Spread the loveಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇನಲ್ಲಿ ಯುವತಿ ಸಾಯಿ ಸುರಭಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ