Breaking News

ಅರಣ್ಯ ಭೂಮಿʼಯಲ್ಲಿ ʻಕೃಷಿʼ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ʻಹಕ್ಕುಪತ್ರʼ ವಿತರಣೆ

Spread the love

ಬೆಂಗಳೂರು : ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ.

ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರುವವರಿಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಜನವರಿ ಒಳಗಾಗಿ 7 ಸಾವಿರ ಜನರಿಗೆ ಹಕ್ಕು ಪತ್ರ ನೀಡಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ