ಬೆಳಗಾವಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ (Ram JanmaBhoomi) ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ (Ram Mandir) ಉದ್ಘಾಟನೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅಕ್ಷತಾ ಅಭಿಯಾನದ ಅಂಗವಾಗಿ ವಿಶ್ವ ಹಿಂದು ಪರಿಷತ್ (Vishwa Hindu Parishad) ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದರು.
ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ವಿಶ್ವ ಹಿಂದು ಪರಿಷತ್ತಿನ ಪ್ರಮುಖರಾದ ಪರಮೇಶ್ವರ ಹೆಗಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್, ಗುರುದತ್ತ ಕುಲಕರ್ಣಿ ಉಪಸ್ಥಿತರಿದ್ದರು.