Breaking News

ಐತಿಹಾಸಿಕ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ದಿನಕ್ಕೆ ಒಂದು ಲಕ್ಷದಂತೆ ಸರಾಸರಿ ಕಾಣಿಕೆ ಸಂಗ್ರಹವಾಗಿದೆ. ನಗದು ಜೊತೆಗೆ 2 ವಿದೇಶಿ ನೋಟು, 3 ವಿದೇಶಿ ನಾಣ್ಯ ಸಿಕ್ಕಿವೆ.

Spread the love

ಕೊಪ್ಪಳ, ಜ.05: ಜಿಲ್ಲೆಯ ಗಂಗಾವತಿ(Gangavathi) ತಾಲೂಕಿನಲ್ಲಿರುವ ಐತಿಹಾಸಿಕ ಅಂಜನಾದ್ರಿ(Anjanadri) ಆಂಜನೇಯ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ಕೇವಲ 22 ದಿನಗಳಲ್ಲಿ ಬರೊಬ್ಬರಿ 27 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿದೆ. ಹನುಮಮಾಲಾ ವಿಸರ್ಜನೆ ಹಿನ್ನೆಲೆ ಲಕ್ಷಾಂತರ ಭಕ್ತರು ಆಗಮಿಸಿದ್ದರು.

ಅದರಂತೆ ದೇವಸ್ಥಾನದಲ್ಲಿದಿನಕ್ಕೆ ಒಂದು ಲಕ್ಷದಂತೆಸರಾಸರಿ ಕಾಣಿಕೆ ಸಂಗ್ರಹವಾಗಿದೆ. ನಗದು ಜೊತೆಗೆ 2 ವಿದೇಶಿ ನೋಟು, 3 ವಿದೇಶಿ ನಾಣ್ಯ ಸಿಕ್ಕಿವೆ. ಇನ್ನು ತಹಶೀಲ್ದಾರ್​​​ ವಿಶ್ವನಾಥ್​​​ ಮುರಡಿ ನೇತೃತ್ವದಲ್ಲಿ ಪೊಲೀಸ್​​ ಬಂದೋಬಸ್ತ್​​​ ಸೇರಿದಂತೆ ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ನಡೆಸಲಾಗಿತ್ತು.

ಅಂಜನಾದ್ರಿ ಬಗ್ಗೆ ಮಾಹಿತಿ

ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ವರ್ಷವೂ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ಬೆಟ್ಟವನ್ನು ಹತ್ತಿ, ಆಂಜನೇಯನ ದರ್ಶನ ಪಡೆಯಲು ಬರೊಬ್ಬರಿ 550 ಮೆಟ್ಟಿಲುಗಳನ್ನು ಏರಬೇಕು. ಜೊತೆಗೆ ಬೆಟ್ಟದ ಮೇಲಿನ ದೇವಾಲಯವು ನೋಡಲು ಆಕರ್ಷಕವಾಗಿದ್ದು, ಭಕ್ತ ಸಮೂಹವನ್ನು ಸ್ವಾಗತಿಸುತ್ತದೆ.

ಈ ದೇವಾಲಯದ ಒಳಗಡೆ ಹನುಮನ ಇಷ್ಟದೇವತೆಗಳಾದ ರಾಮ-ಸೀತೆಯರನ್ನು ಪೂಜಿಸಲಾಗುತ್ತದೆ. ಇನ್ನು ವಿಶೇಷವೆಂದರೆ ಈ ದೇವಾಲಯದ ಒಳಗಡೆ ಇರುವ ಅರ್ಚಕರೊಬ್ಬರು ಹೋದಂತಹ ಪ್ರವಾಸಿಗರಿಗೆ ಕನ್ನಡ ಮತ್ತು ಹಿಂದಿ ಎರಡು ಭಾಷೆಗಳಲ್ಲಿಯೂ ಈ ಸ್ಥಳದ ಮಹಿಮೆಯನ್ನು ಚೆನ್ನಾಗಿ ತಿಳಿಸಿ ಕೊಡುತ್ತಾರೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ