Breaking News

ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಕೊಪ್ಪಳ ಯುವಕ;

Spread the love

ಕೊಪ್ಪಳ, ಜ.04: ಭವ್ಯ ರಾಮ ಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಉಳದಿವೆ (Ayodhya Ram Mandir). ರಾಮ ಮಂದಿರವನ್ನು ನೋಡಬೇಕು. ರಾಮನ (Lord Rama) ದರ್ಶನ ಪಡೆಯಬೇಕು ಅನ್ನೋದು ಕೋಟ್ಯಂತರ ಜನರ ಆಶಯವಾಗಿದೆ. ಆದರೆ ರಾಮ ಮಂದಿರ ನಿರ್ಮಾಣ ಕಾರ್ಯ ಸಿಗೋದು ಅದೃಷ್ಟದ ವಿಷಯವೇ. ಇಂತಹದೊಂದು ಅದೃಷ್ಟ ಕೊಪ್ಪಳ ಜಿಲ್ಲೆಯ ಓರ್ವ ಶಿಲ್ಪಿಗೆ ದೊರೆತಿದೆ. ಇದು ಕೊಪ್ಪಳ ಜಿಲ್ಲೆಯ ಜನರ ಸಂತಸಕ್ಕೆ ಕಾರಣವಾಗಿದೆ.

ಕೊಪ್ಪಳ ತಾಲೂಕಿನ ಕಾತರಕಿ ಗುಡ್ಲಾನೂರ ಗ್ರಾಮದ ಇಪ್ಪತ್ತಾರು ವರ್ಷದ ನಾಗಮೂರ್ತಿಸ್ವಾಮಿ ಪಂಚಾನನಗುರು ಅನ್ನೋ ಓರ್ವ ಶಿಲ್ಪಿ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ. ರಾಮ ಮಂದಿರದ ಗರ್ಭಗುಡಿ ಮುಂದಿರುವ ಮಂಟಪದ ಕಂಬಗಳ ಕೆತ್ತನೆಯ ಕೆಲಸವನ್ನು ನಾಗಮೂರ್ತಿ ಸ್ವಾಮಿ ಮಾಡುತ್ತಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಧಾರವಾಡ ಮೂಲದ ಶಿಲ್ಪಿಯಿಂದ ಇಂತಹದೊಂದು ಅವಕಾಶ ಬಂದಾಗ, ಸಂತೋಷದಿಂದ ಒಪ್ಪಿಕೊಂಡಿದ್ದ ನಾಗಮೂರ್ತಿ ಸ್ವಾಮಿ, ತಿಂಗಳ ಹಿಂದೆಯೋ ಅಯೋಧ್ಯೆಗೆ ಹೋಗಿ, ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಜಾನೆ ಎಂಟು ಗಂಟೆಯಿಂದ ರಾತ್ರಿ ಎಂಟು ಗಂಟೆವರಗೆ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಶಿಲ್ಪ ತಯಾರಿಕೆ, ವಾಸ್ತುಶಿಲ್ಪಗಳ ನಿರ್ಮಾಣ ಕಾರ್ಯ ಮಾಡುತ್ತಿದ್ದ ನಾಗಮೂರ್ತಿ ಸ್ವಾಮಿ ಅವರಿಗೆ, ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಅವಕಾಶ ಸಿಕ್ಕಿರುವುದು ಕುಟುಂಬದವರ ಸಂತಸಕ್ಕೆ ಕಾರಣವಾಗಿದೆ. ಅನೇಕರಿಗೆ ರಾಮ ಮಂದಿರ ನೋಡುವ ಅವಕಾಶಕ್ಕಾಗಿ ಕಾದರೆ, ತಮ್ಮ ಕುಟುಂಬಕ್ಕೆ ರಾಮ ಮಂದಿರ ನಿರ್ಮಾಣದಲ್ಲಿಯೇ ಅವಕಾಶ ಸಿಕ್ಕಿರುವುದು, ತಮ್ಮ ಸೌಭಾಗ್ಯ ಎಂದು ನಾಗಮೂರ್ತಿ ಸ್ವಾಮಿ ಸಹೋದರ ವಿರುಪಾಕ್ಷಿಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ