Breaking News

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ

Spread the love

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ

ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್‌ ಕಾರ್ತಿಕ್​​ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್‌ ರಾಜು ದೂರು ನೀಡಿದ್ದಾರೆ.

ನೆಲಮಂಗಲ, ಜನವರಿ 08: ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ (Fraud) ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್‌ ಕಾರ್ತಿಕ್​​ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ಅಡವಿಟ್ಟ ಕಾರು ಬಿಡಿಸಿಕೊಳ್ಳಲು ರಾಜು ಬಳಿಯಿಂದ ಹಣ ಪಡೆದಿದ್ದ.

ಕಾರ್ತಿಕ್ ಮಾತು ನಂಬಿ ರಾಜು ಬ್ಯಾಂಕ್‌ನಲ್ಲೇ ಹಣ ಕೊಟ್ಟಿದ್ದ. ಸಾಕ್ಷಿಗಾಗಿ ಬ್ಯಾಂಕಿನಲ್ಲಿ ಹಣ ಎಣಿಸುವ ದೃಶ್ಯ ಸೆರೆ ಹಿಡಿಯಲಾಗಿದೆ. ಇದೀಗ ಕಾನ್ಸ್‌ಟೇಬಲ್ ಕಾರ್ತಿಕ್ ಹಣ ವಾಪಸ್ ಕೇಳಿದರೆ ಸಬೂಬು ಹೇಳುತ್ತಿದ್ದಾರೆ. ಈ ಕುರಿತಾಗಿ ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್‌ ರಾಜು ದೂರು ನೀಡಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ