Breaking News

ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು:ಎಚ್.ವಿಶ್ವನಾಥ್

Spread the love

ಬೆಂಗಳೂರು: ಸಾರ್ವತ್ರಿಕ ಚುನಾವಣೆಗೆ ಹೋಗಬೇಕೆಂದರೆ ಹೊಸ ಮುಖಗಳು ಬೇಕು. ಹೀಗಾಗಿ ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ಹಾಲಿ ಸಚಿವರನ್ನಿಟ್ಟುಕೊಂಡು ಹೋದರೆ ಮುಂದಿನ ಸಾರ್ವತ್ರಿಕ ಚುನಾವಣೆ ಗೆಲ್ಲುವುದು ಕಷ್ಟ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹಾಲಿ ಸಚಿವರಿಗೆ ಎಚ್.ವಿಶ್ವನಾಥ್ ಟಾಂಗ್ ನೀಡಿದ್ದಾರೆ. ಉಪಚುನಾವಣೆ ಸಹಜವಾಗಿ ಸರ್ಕಾರದ ಪರವಾಗಿ ಬರುತ್ತದೆ. ಉಪಚುನಾವಣೆಗಳನ್ನು ಸರ್ಕಾರಗಳು ನಡೆಸುತ್ತವೆ. ಆದರೆ ಸಾರ್ವತ್ರಿಕ ಚುನಾವಣೆ ಪಕ್ಷ ನಡೆಸುತ್ತದೆ. ಹೀಗಾಗಿ ಹೊಸ ಮುಖಗಳು ಸಂಪುಟದೊಂದಿಗೆ ಹೋಗಬೇಕು. ಸಾರ್ವತ್ರಿಕ ಚುನಾವಣೆ ಗೆಲ್ಲಬೇಕಾದರೆ ಸಂಪುಟ ಪುನರ್ ರಚನೆಯಾಗಬೇಕಾಗುತ್ತದೆ ಎಂದು ವಿಶ್ವನಾಥ್ ಹೇಳಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ