Breaking News

ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು:ಎಚ್.ವಿಶ್ವನಾಥ್

Spread the love

ಬೆಂಗಳೂರು: ಸಾರ್ವತ್ರಿಕ ಚುನಾವಣೆಗೆ ಹೋಗಬೇಕೆಂದರೆ ಹೊಸ ಮುಖಗಳು ಬೇಕು. ಹೀಗಾಗಿ ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ಹಾಲಿ ಸಚಿವರನ್ನಿಟ್ಟುಕೊಂಡು ಹೋದರೆ ಮುಂದಿನ ಸಾರ್ವತ್ರಿಕ ಚುನಾವಣೆ ಗೆಲ್ಲುವುದು ಕಷ್ಟ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹಾಲಿ ಸಚಿವರಿಗೆ ಎಚ್.ವಿಶ್ವನಾಥ್ ಟಾಂಗ್ ನೀಡಿದ್ದಾರೆ. ಉಪಚುನಾವಣೆ ಸಹಜವಾಗಿ ಸರ್ಕಾರದ ಪರವಾಗಿ ಬರುತ್ತದೆ. ಉಪಚುನಾವಣೆಗಳನ್ನು ಸರ್ಕಾರಗಳು ನಡೆಸುತ್ತವೆ. ಆದರೆ ಸಾರ್ವತ್ರಿಕ ಚುನಾವಣೆ ಪಕ್ಷ ನಡೆಸುತ್ತದೆ. ಹೀಗಾಗಿ ಹೊಸ ಮುಖಗಳು ಸಂಪುಟದೊಂದಿಗೆ ಹೋಗಬೇಕು. ಸಾರ್ವತ್ರಿಕ ಚುನಾವಣೆ ಗೆಲ್ಲಬೇಕಾದರೆ ಸಂಪುಟ ಪುನರ್ ರಚನೆಯಾಗಬೇಕಾಗುತ್ತದೆ ಎಂದು ವಿಶ್ವನಾಥ್ ಹೇಳಿದ್ದಾರೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ