Breaking News

ವಿಜಯಪುರ: ಜ.12 ರಿಂದ ಸಿದ್ದೇಶ್ವರ ಜಾತ್ರೆ ಮಹೋತ್ಸವ; ಯಾವ ದಿನ ಏನೇನು ನಡೆಯಲಿದೆ? ಮಾಹಿತಿ ಇಲ್ಲಿದೆ

Spread the love

ವಿಜಯಪುರ,: ಕೊರೊನಾ ಹಾಗೂ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಕಳೆದ ಮೂರು ವರ್ಷಗಳಿಂದನಗರದಸಿದ್ದೇಶ್ವರ ಜಾತ್ರಾ‌ ಮಹೋತ್ಸವ (Siddheshwar Fair) ನಡೆಸಿರಲಿಲ್ಲ. ಇದೀಗ ಜನವರಿ 12 ರಿಂದ ಜಾತ್ರೆ ಆರಂಭವಾಗಲಿದ್ದು, 18ರ ವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆ ದಿನಗಳಂದು ವಿವಿಧ ಕಾರ್ಯಕ್ರಮಗಳನ್ನು ಪೂಜಾ ವಿಧಿವಿಧಾನಗಳು ನಡೆಯಲಿವೆ.

ಜಾತ್ರಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಜಾತ್ರಾ‌ ಉತ್ಸವ ಸಮೀತಿ ಅಧ್ಯಕ್ಷ ಗುರು ಗಚ್ಚಿನಮಠ, ಜನೇವರಿ 12 ರಂದು ಗೋಮಾತೆ ಪೂಜೆ ಹಾಗೂ ನಂದಿಧ್ವಜಗಳ ಮೆರವಣಿಗೆ ನಡೆಯಲಿದೆ. ಜನೇವರಿ 13 ರಂದು ಲಿಂಗದಗುಡಿಯಲ್ಲಿನ 770 ಲಿಂಗಗಳಿಗೆ ಎಣ್ಣೆ ಮಜ್ಜನ, ಜನೇವರಿ 14 ರಂದು ಅಕ್ಷತಾರ್ಪಣೆ ಹಾಗೂ ಭೋಗಿ ಕಾರ್ಯಕ್ರಮ ನಡೆಯಲಿದೆ ಎಂದರು.

 

ಜನೇವರಿ 15 ರಂದು ಹೋಮ ಹವನ ಪಲ್ಲಕ್ಕಿ ಮೆರವಣಿಗೆ, ಜನೇವರಿ 16 ರಂದು ಮದ್ದು ಸುಡುವ ಕಾರ್ಯಕ್ರಮ, ಜನೇವರಿ 17 ರಂದು ಭಾರ ಎತ್ತುವ ಸ್ಪರ್ಧೆ, ಜನೇವರಿ 18 ರಂದು ಜಂಗೀ ನಿಕಾಲಿ ಕುಸ್ತಿ ಸ್ಪರ್ಧೆ ನಡೆಯಲಿದ್ದು, ರಾಜ್ಯ ರಾಷ್ಟ್ರ ಮಟ್ಟದ ಕುಸ್ತಿ ಪಟುಗಳು ಭಾಗಿಯಾಗಲಿದ್ದಾರೆ ಎಂದರು. ಈ ವೇಳೆ, ಸಿದ್ದೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ, ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳು ಇದ್ದರು.

ವ್ಯಾಪಾರ ಧರ್ಮ ದಂಗಲ್

ಧಾರ್ಮಿಕ ದತ್ತಿ ಕಾನೂನಿನ ಪ್ರಕಾರವೇ ಅನ್ಯ ಧರ್ಮೀಯರಿಗೆ ವ್ಯಾಪಾರದ ಅವಕಾಶ ಇಲ್ಲ ಅಂತ ವಾದಿಸಿ ಹಿಂದೂ ಸಂಘಟನೆಗಳು ಜಾತ್ರಾ ಮಹೋತ್ಸವಗಳಂದು ಅನ್ಯಕೋಮಿನವರಿಗೆ ವ್ಯಾಪಾರ ನಿಷೇಧಿಸಿ ಬ್ಯಾನರ್​ಗಳನ್ನು ಹಾಕುತ್ತಿವೆ. ಕರಾವಳಿಯಲ್ಲಿ ಆರಂಭವಾದ ಈ ವಿವಾದ ರಾಜ್ಯಾದ್ಯಂತ ಹಬ್ಬಿದ್ದು, ವಿಜಯಪುರ ಜಾತ್ರೆಯಲ್ಲೂ ಈ ರೀತಿಯ ಬ್ಯಾನರ್ ಕಾಣಿಸಿದೆ. ಬಳಿಕ ಪೊಲೀಸರ ನೆರವಿನಿಂದ ಸಿದ್ದೇಶ್ವರ ಸಂಸ್ಥೆಯ ಸಿಬ್ಬಂದಿ ಬ್ಯಾನರ್ ತೆರವುಗೊಳಿಸಿದ್ದಾರೆ. ಬ್ಯಾನರ್ ಮತ್ತೇ ಅದೇ ಸ್ಥಳದಲ್ಲಿ ಹಾಕಬೇಕೆಂದು ಶ್ರೀರಾಮ ಸೇನಾ ಸಂಘಟನೆ ಮುಖಂಡ ನೀಲಕಂಠ ಕಂದಗಲ್ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ