Breaking News

ಬೆಳಗಾವಿ ಲೋಕಸಭಾ ಅಭ್ಯರ್ಥಿಯ ಆಯ್ಕೆ ಎಂ.ಬಿ ಪಾಟೀಲ್& ಸತೀಶ್ ಜಾರಕಿಹೊಳಿ ಆಯ್ಕೆ ಮಾಡಿ: ಡಿ.ಕೆ. ಶಿವುಕುಮಾರ್

Spread the love

ಬೆಂಗಳೂರು: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಯ ಆಯ್ಕೆಗಾಗಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಅವರು ಸಮಿತಿ ರಚನೆ ಮಾಡಿದ್ದಾರೆ.
ಸಮಿತಿ ಅಧ್ಯಕ್ಷರಾಗಿ ಶಾಸಕ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಸಂಯೋಜಕರಾಗಿ ಹಾಗೂ ಸದಸ್ಯರಾದ ಎಲ್.ಹನುಮಂತಯ್ಯ, ಹೆಚ್.ಎಂ.ರೇವಣ್ಣ, ವೀರಕುಮಾರ್ ಎ ಪಾಟೀಲ್, ಅಜಯ್ ಕುಮಾರ್ ಸರ್ ನಾಯಕ್, ಅನಿಲ್ ಲಾಡ್, ಜಿ.ಎಸ್.ಪಾಟೀಲ್, ಬಸವರಾಜ್ ಶಿವಣ್ಣನವರ್, ಶ್ರೀನಿವಾಸ್ ವಿ.ಮಾನೆ, ನಾಗರಾಜ್ ಚೆಬ್ಬಿ ಅವರನ್ನು ಆಯ್ಕೆ ಮಾಡಿದ್ದು, ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಆಕಾಂಕ್ಷಿಗಳ ಪಟ್ಟಿಯನ್ನು ತಯಾರಿಸಿ ಕೆಪಿಸಿಸಿಗೆ ಕೂಡಲೇ ಸಲ್ಲಿಸಬೇಕೆಂದು ಡಿ.ಕೆ. ಶಿವುಕುಮಾರ್ ಕೋರಿದ್ದಾರೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ