Breaking News

ಸುರ್ಜೇವಾಲ ಹೇಳಿಕೆ ನಡುವೆಯೂ ಮೂರು ಡಿಸಿಎಂ ಆಯ್ಕೆ ಬಗ್ಗೆ ಮಾತು ಮುಂದುವರಿಸಿದ ಕೆಎನ್ ರಾಜಣ್ಣ

Spread the love

ದೇವನಹಳ್ಳಿ, : ಕರ್ನಾಟಕದಲ್ಲಿ ಮೂರು ಡಿಸಿಎಂ (DCM) ಹುದ್ದೆ ಸೃಷ್ಟಿ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ನಿನ್ನೆಯಷ್ಟೇ ರಾಜ್ಯ ಕಾಂಗ್ರೆಸ್ ಉಸ್ತುವಾರಿರಣದೀಪ್ ಸಿಂಗ್ ಸುರ್ಜೆವಾಲ(Randeep Singh Surjewala) ಹೇಳಿದ್ದರು. ಆ ಮೂಲಕ ಹೆಚ್ಚುವರಿ ಡಿಸಿಎಂ ಆಯ್ಕೆಗೆ ಫುಲ್​ಸ್ಟಾಪ್ ಇಟ್ಟಿದ್ದರು. ಆದರೆ, ಇಂದು ಹೈಕಮಾಂಡ್ ಭೇಟಿಗೂ ಮುನ್ನ ಸಚಿವ ಕೆಎನ್ ರಾಜಣ್ಣ (KN Rajanna) ಅವರು ಹೆಚ್ಚುವರಿ ಡಿಸಿಎಂ ಆಯ್ಕೆ ಬಗ್ಗೆ ಮತ್ತೆ ಮಾತೆತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ, ಲೋಕಸಭಾ ಚುನಾವಣೆಗೂ ಮುನ್ನ ಹೆಚ್ಚುವರಿ ಡಿಸಿಎಂ ಮಾಡಿದರೆ ಒಳ್ಳೆಯದಾಗುತ್ತದೆ. ಈ ಬಗ್ಗೆ ಈಗಾಗಲೇ ಹೈಕಮಾಂಡ್​ಗೆ ಸಲಹೆ ನೀಡಿದ್ದೇವೆ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ಧರಿರುವುದಾಗಿ ಹೇಳಿದರು.

ದೆಹಲಿಗೆ ಹೋಗುತ್ತಿರುವ ವಿಚಾರವಾಗಿ ಮಾತನಾಡಿದ ರಾಜಣ್ಣ, ವರಿಷ್ಠರು 28 ಕ್ಷೇತ್ರಗಳ ಉಸ್ತುವಾರಿ ಸಚಿವರ ಸಭೆ ಕರೆದಿದ್ದಾರೆ. 28 ಕ್ಷೇತ್ರಗಳ ಉಸ್ತುವಾರಿ ಸಚಿವರು ಸಭೆಯಲ್ಲಿ ಭಾಗವಹಿಸುತ್ತಾರೆ ಎಂದರು.

ರಾಮಮಂದಿರ ಉದ್ಘಾಟನೆಗೆ ಕಾಂಗ್ರೇಸ್ ನಾಯಕರು ಹೋಗದಿರಲು ನಿರ್ಧರಿಸಿದ ವಿಚಾರವಾಗಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಮ್ಮ ನಾಯಕರು ಈಗಾಗಲೇ ಕಾರಣ ತಿಳಿಸಿದ್ದಾರೆ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ