ಯಾರಿಗೆ ಯಾವ ಖಾತೆ ಮೇಲೆ ಕಣ್ಣು?
ಗೃಹಸಚಿವರಾಗಿರುವ ಬೊಮ್ಮಾಯಿ ಇಂಧನ ಖಾತೆ ಮೇಲೆ ಕಣ್ಣು ಇಟ್ಟಿದ್ದರೆ ಕೈಗಾರಿಕಾ ಖಾತೆಯನ್ನು ನೋಡಿಕೊಳ್ಳುತ್ತಿರುವ ಜಗದೀಶ್ ಶೆಟ್ಟರ್ ಗ್ರಾಮೀಣಾಭಿವೃದ್ಧಿ ಮತ್ತು ಕಂದಾಯ ಇಲಾಖೆ ಮೇಲೆ ಕಣ್ಣಿಟ್ಟಿದ್ದಾರೆ.
ಆರ್. ಅಶೋಕ್ ಅವರು ಹಾಲಿ ಕಂದಾಯ ಸಚಿವರಾಗಿದ್ದು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಬಯಸಿದ್ದಾರೆ. ಸದ್ಯ ಸಿಎಂ ಯಡಿಯೂರಪ್ಪನವರು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ನೋಡಿಕೊಳ್ಳುತ್ತಿದ್ದಾರೆ.
ವಸತಿ ಇಲಾಖೆಯನ್ನು ನೋಡಿಕೊಳ್ಳುತ್ತಿರುವ ವಿ.ಸೋಮಣ್ಣ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಮೇಲೆ ಕಣ್ಣು ಹಾಕಿದ್ದರೆ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಕಂದಾಯ ಇಲಾಖೆ ಮೇಲೆ ಗಮನ ಹಾಕಿದ್ದಾರೆ.
ಶ್ರೀರಾಮುಲು ಅವರು ಸದ್ಯ ಸಮಾಜ ಕಲ್ಯಾಣ ಇಲಾಖೆಯನ್ನು ನೋಡಿಕೊಳ್ಳುತ್ತಿದ್ದಾರೆ. ಆದರೆ ಈಗ ಹೆಚ್ಚುವರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಕೇಳಿದ್ದಾರೆ. ಹಾಲಿ ಅರಣ್ಯ ಸಚಿವ ಆನಂದ್ ಸಿಂಗ್ ಗಣಿ/ಭೂವಿಜ್ಞಾನ ಇಲಾಖೆಯ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.