Breaking News

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ‘ ಮೋದಿ ರಾಜಕೀಯ’ ಒಗ್ಗಟ್ಟಾಗಿ ಬಿಜೆಪಿಯನ್ನು ಮಣಿಸುತ್ತೇವೆ ಎಂದು – ರಾಹುಲ್ ಗಾಂಧಿ

Spread the love

ನಾಗಾಲ್ಯಾಂಡ್‌ : ರಾಮಲಲ್ಲಾ(Ramlalla) ಪ್ರಾಣ ಪ್ರತಿಷ್ಟಾಪನಾ ಕಾರ್ಯಕ್ರಮ ಮೋದಿ(Modi centered event) ಕೇಂದ್ರೀಕೃತ ‘ರಾಜಕೀಯ ಕಾರ್ಯಕ್ರಮ’ವಾಗಿ ಹೀಗಾಗಿ ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್‌ ಪಕ್ಷಕ್ಕೆ ಕಷ್ಟವಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

 

ಭಾರತದ ಜೋಡೊ ನ್ಯಾಯ ಯಾತ್ರೆ ನಾಗಾಲ್ಯಾಂಡ್‌ ತಲುಪಿದ್ದು, ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಸಂಸದ ರಾಹುಲ್ ಗಾಂಧಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಚುನಾವಣೆಯ ಬಣ್ಣ ನೀಡಿದ್ದಾರೆ . ನಮ್ಮ ಸಿದ್ದಾಂತಗಳ ವಿರೋಧಿಗಳು ಕಾರ್ಯಕ್ರಮವನ್ನು ಚುನಾವಣಾ ಕಾರ್ಯಕ್ರಮವಾಗಿ ಮಾಡಿದಾಗ ಅಂತಹ ಕಾರ್ಯಕ್ರಮಕ್ಕೆ ನಮ್ಮ ನಾಯಕರು ಹೋಗುವುದು ಸರಿ ಎನಿಸುವುದಿಲ್ಲ ಹೀಗಾಗಿ ಹೋಗುತ್ತಿಲ್ಲ ಎಂದು ಅವರು ಹೇಳಿದರು.

ಸೀಟು ಹಂಚಿಕೆ ಸಮಸ್ಯೆ ಬಗೆಹರಿಯಲಿದೆ.

ಸೀಟು ಹಂಚಿಕೆ ವಿಚಾರದಲ್ಲಿ ಎದ್ದಿರುವ ಗೊಂದಲಗಳ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ನನಗೆ ಇಂಡಿಯಾ ಮೈತ್ರಿಕೂಟದಲ್ಲಿರುವ ಎಲ್ಲಾ ಸಣ್ಣಪುಟ್ಟ ಸಮಸ್ಯೆಗಳು ಬಗೆಹರಿಯುವ ಭರವಸೆ ಇದೆ, ಒಗ್ಗಟ್ಟಾಗಿ ಬಿಜೆಪಿಯನ್ನು ಮಣಿಸುತ್ತೇವೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ