Breaking News

ಪ್ರೇಮಿಗಳ ನಡುವೆ ಕಿರಿಕ್‌; ನಡುರಸ್ತೆಯಲ್ಲೇ ಯುವತಿಗೆ ಚೂರಿ ಹಾಕಿದ ಯುವಕ

Spread the love

ಶಿವಮೊಗ್ಗ : ಯುವಕನೊಬ್ಬ ನಡುರಸ್ತೆಯಲ್ಲೇ ತನ್ನ ಪ್ರೇಯಸಿಗೆ ಚೂರಿಯಿಂದ ಇರಿದ (lover stabbed at Shivamogga) ಘಟನೆ ಶಿವಮೊಗ್ಗದಲ್ಲಿ (Shivamogga news) ನಡೆದಿದೆ. ಪರಸ್ಪರ ಪ್ರೀತಿಸುತ್ತಿದ್ದ (Love Case) ಅವರಿಬ್ಬರ ನಡುವೆ ಯಾವುದೋ ಕಾರಣಕ್ಕೆ ಕಿರಿಕ್‌ ಉಂಟಾಗಿ ಭಾರಿ ಜಗಳ ನಡೆದಿದೆ.

ಈ ನಡುವೆ ಯುವಕ ಆಕೆಗೆ ಚೂರಿಯಿಂದ ಇರಿದಿದ್ದಾನೆ.

28 ವರ್ಷದ ಚೇತನ್‌ ಮತ್ತು 22 ವರ್ಷದ ಅಂಬಿಕಾ ಒಂದೇ ಊರಿನವರು. ಶಿವಮೊಗ್ಗ ಜಿಲ್ಲೆಯ ಆಡೋನಹಳ್ಳಿ ಗ್ರಾಮದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಊರಿನಿಂದ ಶಿವಮೊಗ್ಗಕ್ಕೆ ಬಂದಿದ್ದರು. ಶಿವಪ್ಪ ನಾಯಕ ವೃತ್ತದ ಬಳಿ ಬಂದಿದ್ದ ಅವರು ಪರಸ್ಪರ ಜಗಳವಾಡಿಕೊಂಡಿದ್ದರು. ಆಗ ಯುವಕ ಯುವತಿಗೆ ಚೂರಿಯಿಂದ ಇರಿದಿದ್ದಾನೆ.

ನಡು ರಸ್ತೆಯಲ್ಲಿ ಚೂರಿ ಇರಿತಕ್ಕೆ ಒಳಗಾದ ಅಂಬಿಕಾ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಆಕೆ ಸ್ವಲ್ಪ ದೂರ ಹೋಗಿ ಬಿದ್ದಿದ್ದು, ಕೂಡಲೇ ಅಲ್ಲಿದ್ದವರು ಚೇತನ್‌ನನ್ನು ತಡೆದರು. ಮತ್ತು ಇರಿತಕ್ಕೆ ಒಳಗಾದ ಅಂಬಿಕಾಳನ್ನು ಕೂಡೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಯುವತಿ ಜೀವಾಪಾಯದಿಂದ ಪಾರಾದಂತೆ ಕಂಡುಬಂದಿದ್ದಾಳೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ