Breaking News

ಸಿಎಂ ಸ್ಥಾನದ ಬಗ್ಗೆ ಬಾಂಬ್ ಸಿಡಿಸಿದ ಯತೀಂದ್ರ: ಪಕ್ಷದಲ್ಲಿ ಹೆಚ್ಚಾಗಲಿದೆಯಾ ಗದ್ದುಗೆ ಗುದ್ದಾಟ?

Spread the love

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಕಾಂಗ್ರೆಸ್ (Congress) ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ (CM Siddaramaiah) ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಅವರ ಪುತ್ರ ಯತೀಂದ್ರ (Yathindra) ಹೇಳಿದ್ದು ದೊಡ್ಡ ಬಾಂಬ್ ಸಿಡಿಸಿದ್ದಾರೆ.

 

ಈ ಬಗ್ಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತಿದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು (guarantee) ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್​ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಹೇಳಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 56 ಸಾವಿರ ಕೋಟಿ ರೂ. ಖರ್ಚು ಆಗುತ್ತದೆ. ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣವನ್ನು ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು. ಆಗ ಸಿದ್ದರಾಮಯ್ಯ 5 ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ.


Spread the love

About Laxminews 24x7

Check Also

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the loveಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ