Breaking News

ಟೆಂಟ್​​ನಲ್ಲಿ 2 ಗೊಂಬೆ ಇಟ್ಟು ರಾಮ, ರಾಮ ಎನ್ನುತ್ತಿದ್ದರು: ಅಯೋಧ್ಯೆ ಬಗ್ಗೆ ಸಚಿವ ರಾಜಣ್ಣ ವಿವಾದಿತ ಹೇಳಿಕೆ

Spread the love

ತುಮಕೂರು, ಜನವರಿ 16: ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಅಯೋಧ್ಯೆ (Ayodhya)ರಾಮಲಲ್ಲಾ (Ram Lalla) ಬಗ್ಗೆ ನೀಡಿರುವ ಹೇಳಿಕೆ ವಿವಾದಕ್ಕೆ ಗ್ರಾಸವಾಗಿದೆ. ತುಮಕೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕೆಡವಿದ್ದ ನಂತರ ಅಲ್ಲಿಗೆ ಹೋಗಿದ್ದೆ. ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು. ನಮ್ಮೂರಿನ ದೇವಸ್ಥಾನಗಳಿಗೆ ಹೋದಾಗ ಸಿಗುವ ಭಕ್ತಿಯ ಮತ್ತು ಧನಾತ್ಮಕ ಅನುಭೂತಿ ಅಲ್ಲಿರಲಿಲ್ಲ. ಅಯೋಧ್ಯೆಯ ರಾಮಲಲ್ಲಾನ ಬಗ್ಗೆ ನನಗೆ ಏನೂ ಅನಿಸಲೇ ಇಲ್ಲ ಎಂದು ಹೇಳಿದ್ದಾರೆ.

ನಮ್ಮಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಅನೇಕ ರಾಮ ದೇಗುಲಗಳಿವೆ. ಆದರೆ, ಬಿಜೆಪಿ ಚುನಾವಣೆಗಾಗಿ ದೇಗುಲ ಕಟ್ಟುತ್ತಿದೆ. ಬಿಜೆಪಿ ಜನರನ್ನು ಮೋಸ ಮಾಡುತ್ತಿದೆ ಎಂದು ರಾಜಣ್ಣ ಟೀಕಿಸಿದ್ದಾರೆ. ರಾಜಣ್ಣ ಹೇಳಿಕೆಗೆ ಇದೀಗ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ರಾಮಮಂದಿರದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಜನವರಿ 22 ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ಹೊರಗುಳಿಯಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.


Spread the love

About Laxminews 24x7

Check Also

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the loveಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ