Breaking News

ಲಂಚ ಕೊಡು ಇಲ್ಲ ಕೇಸ್​ ಹಾಕಿ ಜೈಲಿಗೆ ಕಳಸ್ತಿವಿ, ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಯ ದರ್ಪ

Spread the love

ಹುಬ್ಬಳ್ಳಿ, ಜನವರಿ 17: ಕುರಿಗಾಹಿ ಮೇಲೆ ಅರಣ್ಯ ಇಲಾಖೆ (Forest Department) ಸಿಬ್ಬಂದಿಗಳು ದರ್ಪ ತೋರಿಸಿದ್ದಾರೆ. ಧಾರವಾಡ (Dharwad) ಜಿಲ್ಲೆಯ ಕಲಘಟಗಿ (Kalagatagi) ತಾಲೂಕಿನ ಸೂಳಿಕಟ್ಟಿ ಅರಣ್ಯ ವೃತ್ತದಲ್ಲಿ ಕುರಿ ಮೇಯಿಸುತ್ತಿದ್ದಕುರಿಗಾಹಿಬೀರಪ್ಪನ ಬಳಿ ಸೂಳಿಕಟ್ಟಿ ಫಾರೆಸ್ಟ್ ಗಾರ್ಡ್ ಆನಂದ‌ ಹಾಗೂ ಇಲಾಖೆಯ ಮತ್ತೋರ್ವ ಸಿಬ್ಬಂದಿ ಲಂಚ ಕೇಳಿದ್ದಾರೆ. ಹಣ ಇಲ್ಲವೆ, ಕುರಿ ಕೊಡುವಂತೆ ಫಾರೆಸ್ಟ್ ಗಾರ್ಡ್ ಆನಂದ ಒತ್ತಾಯಿಸಿದ್ದಾನೆ.

ಮಾಮೂಲಿ ಕೊಡದೆ ಅರಣ್ಯದಲ್ಲಿ ಕುರಿ ಮೇಯಿಸಿದರೇ ಒದ್ದು ಬಿಡುತ್ತೇನೆ. ಗೌಳಿಗರು ಅರಣ್ಯ ಅಧಿಕಾರಿಗಳಿಗೆ ಕೋಳಿ, ಹುಂಜ, ಹಣ ಕೊಡುತ್ತಾರೆ. ಕುರುಬರು ಹಣ ಕೊಡಬೇಕು, ಇಲ್ದಿದಿದ್ದರೇ ಕೇಸ್ ಹಾಕಿ ಜೈಲಿಗೆ ಕಳಿಸುತ್ತೇವೆ ಅಂತಾ ಅವಾಜ್ ಹಾಕಿದ್ದಾರೆ. ಆನಂದ ಹಾಗೂ ಸಹಚರನ ವರ್ತನೆ ಮೊಬೈಲ್‌ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ