Breaking News

ಸಿದ್ದರಾಮಯ್ಯ ಗಾಢ ನಿದ್ರೆಯಿಂದ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ: ಬೊಮ್ಮಾಯಿ

Spread the love

ಬೆಂಗಳೂರು: ನರೇಂದ್ರ ಮೋದಿ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯ ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವ್ಯಂಗ್ಯವಾಡಿದರು.

ಪ್ರಧಾನಿ ನರೇಂದ್ರ ಮೋದಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಡಿರುವ ಟ್ವೀಟ್‌ಗೆ ತಿರುಗೇಟು ನೀಡಿರುವ ಅವರು, ಯುಪಿಎ 2004-2014ರ ಹತ್ತು ವರ್ಷದ ಆಡಳಿತದಲ್ಲಿ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ 81,795.19 ಕೋಟಿ ರೂ.

ಹಾಗೂ ಅನುದಾನ ಹಂಚಿಕೆ ರೂಪದಲ್ಲಿ 60779.84 ಕೋಟಿ ರೂ. ಹಣ ಬಂದರೆ ಮೋದಿ ಅವಧಿಯಲ್ಲಿ 2014-2023 ಡಿಸೆಂಬರ್‌ವರೆಗೆ ತೆರಿಗೆ ಹಂಚಿಕೆಯಲ್ಲಿ 2,82,791 ಕೋಟಿ ರೂ. ಬಂದರೆ, ಅನುದಾನ ಹಂಚಿಕೆಯಲ್ಲಿ 2,08,882.02 ಕೋಟಿ ರೂ. ಬಂದಂತಹ ಹಣ ಇವರ ಕಣ್ಣಿಗೆ ಕಾಣುತ್ತಿಲ್ಲ ಎಂದು ಕಿಡಿಕಾರಿದರು.

ಮೇ ತಿಂಗಳಲ್ಲಿ 360 ಕೋಟಿ ರೂ. ಬಿಡುಗಡೆಯಾಗಿದ್ದು, ಈಗ ಮತ್ತೆ 348 ಕೋಟಿ ರೂ. ಬಿಡುಗಡೆಗೆ ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇಷ್ಟಾದರೂ ಕೂಡ ರೈತರಿಗೆ ಬಿಡಿಗಾಸು ಕೊಡಲು ಸಾಧ್ಯವಾಗಿಲ್ಲ. ಪೂರ್ಣ ಪ್ರಮಾಣದಲ್ಲಿ ಪರಿಹಾರ ಕೊಡಲು ನಿಮ್ಮ ಬೊಕ್ಕಸ ಖಾಲಿಯಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಕೃಷ್ಣಾ ಮೆಲ್ದಂಡೆ ಹಾಗೂ ಮಹದಾಯಿ ಎರಡೂ ಯೋಜನೆಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವ್ಯಾಜ್ಯ ಇರುವುದು ಗೊತ್ತಿದ್ದರೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ರಾಜಕಾರಣ ಏಕೆ? ಈ ವರ್ಷ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೊಟಿ ರೂ. ಕೇಂದ್ರದ ಬಜೆಟ್‌ನಲ್ಲಿದ್ದು ಅದನ್ನು ಪಡೆದುಕೊಳ್ಳಲಾಗದೇ ಗಾಢ ನಿದ್ರೆಯಲ್ಲಿದ್ದವರಾರು ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ