Breaking News

ಕಾಂಗ್ರೆಸ್ ಸೋಲಿಗೆ ನಾಯಕರೇ ಕಾರಣ – ತಯಾರಾಗುತ್ತಿದೆ ಚಾರ್ಜ್‍ಶೀಟ್

Spread the love

ಬೆಂಗಳೂರು: ಎರಡು ಉಪಚುನಾವಣೆಯಲ್ಲಿನ ಸೋಲು ಕಾಂಗ್ರೆಸ್‍ನಲ್ಲಿ ಆಂತರಿಕ ಕಲಹ ಭುಗಿಲೇಳುವ ಸಾಧ್ಯತೆ ಕಂಡು ಬರುತ್ತಿದೆ. ಚುನಾವಣಾ ಅಖಾಡದಲ್ಲಿ ಹಿರಿಯರನ್ನು ಕಡೆಗಣಿಸಿ ನಾವೇ ಮೇಲು ಎಂದು ಓಡಾಡಿದವರ ವಿರುದ್ಧ ತಂಡವೊಂದು ಹೈಕಮಾಂಡ್‍ಗೆ ದೂರು ಕೊಡಲು ಚಾರ್ಜ್‍ಶೀಟ್ ಸಿದ್ದಪಡಿಸುತ್ತಿದೆ ಎನ್ನಲಾಗಿದೆ.

ಕೆಲವರು ಪಕ್ಷದ ಶಿಸ್ತು ಮೀರಿ ಸಿಎಂ ಜಪ ಮಾಡಿದ್ದು, ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿತು. ತಮ್ಮ ಬೆಂಬಲಿಗರ ಆಟಾಟೋಪಕ್ಕೆ ಬ್ರೇಕ್ ಹಾಕದೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪರೋಕ್ಷವಾಗಿ ಕುಮ್ಮಕ್ಕು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಿದ್ದಾರೆ ಎಂದು ತಿಳಿದುಬಂದಿದೆ.

ಉಪ ಫಲಿತಾಂಶದ ಬಗ್ಗೆ ಹಿರಿಯ ನಾಯಕ ಎಸ್‍ಎಂ ಕೃಷ್ಣ ಮಾತನಾಡಿ, ದೇಶದಲ್ಲಿ ಬದಲಾವಣೆ ಆಗ್ತಿದೆ. ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ. ಬಿಜೆಪಿ ತನ್ನ ಪ್ರಖರತೆ ಹೆಚ್ಚಿಸಿಕೊಳ್ತಿದೆ. ಮೋದಿ ಒಬ್ಬ ರಾಜ ಋಷಿ ಅಂತಾ ಹೊಗಳಿದ್ದಾರೆ.

ಉಪಚುನಾವಣೆ ಸೋಲಿನ ಬಳಿಕ ಸಿದ್ದರಾಮಯ್ಯ ವಿಮರ್ಶೆ ಮಾಡಿದ ಬಗ್ಗೆ ನಾನು ಪ್ರತಿಕ್ರಿಯೆ ನೀಡೋದಿಲ್ಲ. ಸೋತ ಮೇಲೆ ನಾನಾ ಆಂಗಲ್ ನಲ್ಲಿ ವಿಮರ್ಶೆ ಮಾಡುತ್ತಾರೆ ಎಂದು ಹೇಳಿದರು.

ಮಾಜಿ ಸಚಿವ ಸಿಟಿ ರವಿ ಮಾತನಾಡಿ, ಎಲ್ಲಿದೆ ಬಿಜೆಪಿ ಅಲೆ ಎಂದು ಸಿದ್ದರಾಮಯ್ಯ ಕೇಳಿದ್ರು. ಈಗಲೂ ಬಿಜೆಪಿ ಅಲೆ ಇಲ್ಲ ಅಂದ್ರೆ ಸಿದ್ದರಾಮಯ್ಯಗೆ ದೋಷ ಇದೆ ಎಂದರ್ಥ ಎಂದು ಕಾಲೆಳೆದರು. ಡಿಸಿಎಂ ಲಕ್ಷಣ ಸವದಿ ಅವರು ಕಾಂಗ್ರೆಸ್ ಪಕ್ಷ ಎರಡು ಹೋಳಾದ್ರೂ ಅಚ್ಚರಿ ಇಲ್ಲ ಎಂದು ಭವಿಷ್ಯ ನುಡಿದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ