Breaking News

ಅಯೋಧ್ಯೆಗೆ ಹೆಲಿಕಾಪ್ಟರ್‌ ಸೇವೆಗಳನ್ನು ಪ್ರಾರಂಭಿಸಲಿದೆ ಯುಪಿ ಸರ್ಕಾರ

Spread the love

ಲಕ್ನೋ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವು ಕೆಲವೇ ದಿನಗಳಲ್ಲಿ ನಡೆಯಲಿದ್ದು ಉತ್ತರ ಪ್ರದೇಶ ಸರ್ಕಾರ ಲಕ್ನೋ, ಗೋರಖ್‌ಪುರ, ಪ್ರಯಾಗರಾಜ್, ವಾರಣಾಸಿ, ಆಗ್ರಾ ಮತ್ತು ಮಥುರಾದಿಂದ ಅಯೋಧ್ಯೆಗೆ ಹೆಲಿಕಾಪ್ಟರ್ ಸೇವೆಗಳನ್ನು ನೀಡಲು ನಿರ್ಧರಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಜನವರಿ 19 ರಂದು ಲಕ್ನೋದಿಂದ ಹೆಲಿಕಾಪ್ಟರ್ ಸೇವೆಯನ್ನು ಉದ್ಘಾಟಿಸಲಿದ್ದಾರೆ.

ಹೆಲಿಕಾಪ್ಟರ್ ಸೇವೆಗಳ ದರವನ್ನೂ ಸರ್ಕಾರ ನಿಗದಿಪಡಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಇತರ ಜಿಲ್ಲೆಗಳಿಗೂ ಇದನ್ನು ವಿಸ್ತರಿಸುವ ಯೋಜನೆ ಜಾರಿಯಲ್ಲಿದೆ.

ಇದರ ಜೊತೆಗೆ ರಾಜ್ಯ ಸರ್ಕಾರವು ಭಕ್ತರಿಗೆ ಅಯೋಧ್ಯೆ ನಗರ ಮತ್ತು ರಾಮ ಮಂದಿರದ ವೈಮಾನಿಕ ದರ್ಶನವನ್ನು ಸಹ ಪರಿಚಯಿಸುತ್ತಿದೆ. ಈ ಉಪಕ್ರಮದ ಜವಾಬ್ದಾರಿಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸಲಾಗಿದೆ. ವೈಮಾನಿಕ ದರ್ಶನಕ್ಕೆ ಆಸಕ್ತಿಯುಳ್ಳ ಭಕ್ತರು ಸೌಲಭ್ಯವನ್ನು ಪಡೆಯಲು ಮುಂಗಡ ಬುಕ್ಕಿಂಗ್ ಮಾಡಬೇಕಾಗುತ್ತದೆ.

ಈ ವಿಮಾನ ಪ್ರಯಾಣದ ಅವಧಿಯನ್ನು ಗರಿಷ್ಠ 15 ನಿಮಿಷಗಳಿಗೆ ನಿಗದಿಪಡಿಸಲಾಗಿದ್ದು, ಪ್ರತಿ ಭಕ್ತರಿಗೆ 3,539 ರೂ. ನಿಗದಿಪಡಿಸಲಾಗಿದೆ. ರಾಮ ಮಂದಿರ, ಹನುಮಾನ್‌ಗರ್ಹಿ ಮತ್ತು ಸರಯು ಘಾಟ್ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳನ್ನು ಒಳಗೊಂಡ ವೈಮಾನಿಕ ಪ್ರವಾಸವನ್ನು ಭಕ್ತರು ಆನಂದಿಸಬಹುದು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ