Breaking News
Home / ಹುಬ್ಬಳ್ಳಿ / ಧಾರವಾಡ ಯುವಕನ ಕೈಯಲ್ಲಿ ಅರಳಿದ ರಾಮಲಲ್ಲಾ ವಿಗ್ರಹ

ಧಾರವಾಡ ಯುವಕನ ಕೈಯಲ್ಲಿ ಅರಳಿದ ರಾಮಲಲ್ಲಾ ವಿಗ್ರಹ

Spread the love

ಧಾರವಾಡದ ಯುವ ಕಲಾವಿದ ರೋಹಿತ್ ಹಿರೇಮಠ ತನ್ನದೇ ಕಲ್ಪನೆಯಲ್ಲಿ 15 ಇಂಚು ಎತ್ತರದ ರಾಮಲಲ್ಲಾ ವಿಗ್ರಹವನ್ನು ನಿರ್ಮಿಸಿದ್ದಾರೆ. ನನಗೆ ಮೊದಲಿನಿಂದಲೂ ರಾಮ ಮಂದಿರದ ಬಗ್ಗೆ ಸಾಕಷ್ಟು ಕುತೂಹಲವಿತ್ತು. ಇದೇ ಕಾರಣಕ್ಕೆ ನನ್ನ ಮನಸ್ಸಿನಲ್ಲಿಯೂ ಐದು ವರ್ಷದ ರಾಮಲಲ್ಲಾನ ಚಿತ್ರಣ ಮೂಡಿತು.

ಇದೇ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಇದೇ ವೇಳೆ ಧಾರವಾಡದ ಯುವ ಕಲಾವಿದನೊಬ್ಬ ತನ್ನದೇ ಕಲ್ಪನೆಯಲ್ಲಿ ಮಣ್ಣಿನಲ್ಲಿ ರಾಮಲಲ್ಲಾ ವಿಗ್ರಹವನ್ನು ತಯಾರಿಸಿದ್ದಾನೆ. ಆ ವಿಗ್ರಹ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.

ಈಗಾಗಲೇ ಬೆಂಗಳೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾ ವಿಗ್ರಹವೇ ಅಂತಿಮವಾಗಿದ್ದು ಎಲ್ಲರಿಗೂ ಗೊತ್ತಿರೋ ವಿಚಾರ. ಆದರೆ ಇದುವರೆಗೂ ಅದರ ಫೋಟೋ ಮಾತ್ರ ಎಲ್ಲಿಯೂ ಬಂದಿಲ್ಲ. ಅರುಣ್ ತನ್ನದೇ ಕಲ್ಪನೆಯಲ್ಲಿ ವಿಗ್ರಹವನ್ನು ಕೆತ್ತಿದ್ದು, ಅದು ಹೇಗಿದೆಯೋ ಅನ್ನೋ ಕುತೂಹಲ ದೇಶಾದ್ಯಂತ ಮನೆ ಮಾಡಿದೆ. ಇದೇ ವೇಳೆ ಧಾರವಾಡದ ಯುವ ಕಲಾವಿದನೊಬ್ಬ ತನ್ನದೇ ಕಲ್ಪನೆಯಲ್ಲಿ ರಾಮಲಲ್ಲಾನ ವಿಗ್ರಹವನ್ನು ಮಣ್ಣಿಯಲ್ಲಿ ತಯಾರಿಸಿ, ಎಲ್ಲರ ಗಮನ ಸೆಳೆದಿದ್ದಾನೆ.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ