Home / ರಾಜಕೀಯ / ʻಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕʼ : ಸಚಿವ ಸಂಪುಟ ಒಪ್ಪಿಗೆ

ʻಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕʼ : ಸಚಿವ ಸಂಪುಟ ಒಪ್ಪಿಗೆ

Spread the love

ಬೆಂಗಳೂರು : ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ 2024 ಉದ್ಘಾಟಿಸಿದ ನಂತರ ಮಾತನಾಡಿದರು.

ಬಸವಣ್ಣನವರ ಹೆಸರು ಚಿರಸ್ಥಾಯಿಯಾಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.

ಶಿವಮೊಗ್ಗದಲ್ಲಿರುವ ಜೈಲಿನ 46 ಎಕರೆ ಪ್ರದೇಶದಲ್ಲಿ ಉದ್ಯಾನವನಕ್ಕೆ ಅಲ್ಲಮಪ್ರಭು ಉದ್ಯಾನವನ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಅಲ್ಲಮಪ್ರಭು ಹಾಗೂ ಅಕ್ಕಮಹಾದೇವಿ ಶಿಕಾರಿಪುರದವರಾದ್ದರಿಂದ ಅವರ ಹೆಸರನ್ನೂ ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದರು.

ತೋಟಗಾರಿಕೆ ಇಲಾಖೆಯವರು ಬೆಳೆಯುವ ಹೂ, ಹಣ್ಣುಗಳು,ಇಲಾಖೆಯಲ್ಲಿ ಆಗಿರುವ ಬೆಳವಣಿಗೆಗಳನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ ಇದು. ಎಂದ ಮುಖ್ಯಮಂತ್ರಿಗಳು ತೋಟಗಾರಿಕೆ ಇಲಾಖೆಗೆ ಧನ್ಯವಾದಗಳನ್ನು ಹೇಳಿದರು.

ಗಣರಾಜ್ಯೋತ್ಸವದ ಅಂಗವಾಗಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಇಂದು ಉದ್ಘಾಟಿಸಲಾಗಿದೆ. ಬಸವಾದಿ ಶರಣರ ವಚನ ಸಾಹಿತ್ಯ ಆಧಾರಿತವಾದ ಫಲಪುಷ್ಪ ಪ್ರದರ್ಶನ ಈ ಬಾರಿಯ ವಿಶೇಷತೆ. ಹನ್ನರಡನೆಯ ಶತಮಾನದಲ್ಲಿ ಜಾತಿರಹಿತ ಹಾಗೂ ಮೂಡನಂಬಿಕೆ ಕಂದಾಚಾರಗಳಿಂದ ಮುಖ್ತವಾದ ಸಮ ಸಮಾಜ ನಿರ್ಮಾಣ ಮಾಡಲು ಹೋರಾಟ ನಡೆಸಲಾಗಿತ್ತು ಎಂದರು.

ಈ ವಚನ ಚಳವಳಿಯ ಬಗ್ಗೆ ಜನರಿಗೆ ಪ್ರಚುರಪಡಿಸಲು ಉದ್ದೇಶದಿಂದ ಈ ಬಾರಿಯ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಹಲವಾರು ಬಗೆಯ ಫಲಪುಷ್ಪಗಳ ಮೂಲಕ ಬಸವಾದಿ ಶರಣರ ಸಂದೇಶಗಳನ್ನು ಪ್ರಚುರಪಡಿಸಲಾಗುತ್ತಿದೆ. ಇಂದಿನಿಂದ 28 ನೇ ಜನವರಿ ವರೆಗೆ ಪ್ರದರ್ಶನ ನಡೆಯಲಿದ್ದು, ತೋಟಗಾರಿಕೆ ಇಲಾಖೆ ಮಾಡಿಕೊಟ್ಟಿರುವ ಈ ಅವಕಾಶವನ್ನು ಬೆಂಗಳೂರಿನ ನಾಗರಿಕರು ಸದುಪಯೋಗ ಪಡಿಸಿಕೊಳ್ಳಬೇಕು. ತೋಟಗಾರಿಕಾ ಇಲಾಖೆಯವರಿಂದ ವಿವಿಧ ಫಲ ಪುಷ್ಪಗಳನ್ನು ಬೆಳೆಯಲಾಗುತ್ತದೆ ಎಂಬ ವಿಸ್ತೃತ ಮಾಹಿತಿಯನ್ನು ಜನರು ಪಡೆಯಬಹುದಾಗಿದೆ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ