Breaking News

ಬಡ್ಡಿ ರಹಿತ ಸಾಲ ನೀಡುತ್ತಿದ್ದು, ಈ ಸೌಲಭ್ಯ ಪಡೆಯಲು ನವೆಂಬರ್ 12 ಕೊನೆ ದಿನ

Spread the love

ಬೆಂಗಳೂರು: ಕೇಂದ್ರ ಸರ್ಕಾರ ಆತ್ಮನಿರ್ಭರ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ ನೀಡುತ್ತಿದ್ದು, ಈ ಸೌಲಭ್ಯ ಪಡೆಯಲು ನವೆಂಬರ್ 12 ಕೊನೆ ದಿನವಾಗಿದೆ ಎಂದು ಹಿಂದುಸ್ತಾನ್ ಸಮಾಚಾರ್ ವರದಿ ಮಾಡಿದೆ.
ಆತ್ಮನಿರ್ಭರ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರವರೆಗೆ ಬಡ್ಡಿ ರಹಿತ ಸಾಲ ದೊರೆಯುತ್ತದೆ. ಈ ಹಿಂದಿನ ಅವಧಿಯಲ್ಲಿ ಸುಮಾರು 408 ಮಂದಿ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ ಚೀಟಿ ನೀಡಲಾಗಿದೆ.

ಪಾದರಕ್ಷೆ, ಚರ್ಮ ಉತ್ಪನ್ನಗಳ ರಿಪೇರಿ, ಪಾನೀಯ ಮಾರಾಟ ಮಾಡುವವರು, ಮನೆ ಮನೆಗೆ ತೆರಳಿ ತರಕಾರಿ, ಹೂವು ಮಾರುವವರು, ರಸ್ತೆ ಬಳಿಯ ತಳ್ಳುಬಂಡಿ, ಆಟೋಗಳಲ್ಲಿ ತಿಂಡಿ, ಊಟ ಹಾಗೂ ಬುಟ್ಟಿ ವ್ಯಾಪಾರಿಗಳು ಈ ಸಾಲ ಸೌಲಭ್ಯ ಪಡೆಯಬಹುದು. ಹಾಗೂ ಮಾರಾಟ, ಆಟದ ವಸ್ತು, ಗೃಹೋಪಯೋಗಿ ವಸ್ತು ಮಾರಾಟಗಾರರು ಈ ಯೋಜನೆಗೆ ಒಳಪಡುತ್ತಾರೆ.
ಪಾಲಿಕೆ ವ್ಯಾಪ್ತಿಯ ಬೀದಿ ವ್ಯಾಪಾರಿಗಳು ಈ ಸೌಲಭ್ಯ ಪಡೆಯಲು, ಇತ್ತೀಚಿನ 2 ಭಾವಚಿತ್ರ, ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್ ಹಾಗು ಮೊಬೈಲ್ ಅನ್ನು ತೆಗೆದುಕೊಂಡು ಹೋಗಬೇಕು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ