Breaking News

ರಾಜ್ಯ ಬಿಜೆಪಿ ನಾಯಕರು ಅಯೋಗ್ಯರು ಎಂದ ಪ್ರಿಯಾಂಕ್‌ ಖರ್ಗೆ

Spread the love

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕಕ್ಕೆ ಏಕೆ ಬರ್ತಾರೆ ಅನ್ನೋದೇ ಅವರ ಪಕ್ಷದ ಅಯೋಗ್ಯರಿಗೆ ಗೊತ್ತಿಲ್ಲ ಎಂದು ರಾಜ್ಯ ಬಿಜೆಪಿ (BJP Karnataka) ನಾಯಕರ ಮೇಲೆ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹರಿಹಾಯ್ದಿದ್ದಾರೆ.

ಈ ಮೂಲಕ ಬಿಜೆಪಿ ನಾಯಕರನ್ನು ಅಯೋಗ್ಯರಿಗೆ ಹೋಲಿಕೆ ಮಾಡಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಿಯಾಂಕ್‌ ಖರ್ಗೆ, ರಾಜ್ಯ ಬಿಜೆಪಿಯವರು ಮೊದಲು ನರೇಂದ್ರ ಮೋದಿ ಅವರು ಯಾಕೆ ಬರ್ತಾರೆ ಎಂಬುದನ್ನು ತಿಳಿದುಕೊಳ್ಳಲಿ ಎಂದು ಹೇಳಿದರು.

ಸದ್ಯ ಬಿಜೆಪಿಯವರಿಗೆ ನಾನು‌ ಮನೆ ದೇವರು ಆಗಿಬಿಟ್ಟಿದ್ದೇನೆ. ನನ್ನ ಬಗ್ಗೆ ಮಾತನಾಡುವ ತನಕ ಅವರಿಗೆ ತಿಂದ ಅನ್ನ ಕರಗುವುದಿಲ್ಲ. ನಾನು ಬಿಜೆಪಿ ನಾಯಕರ ಅಯೋಗ್ಯ ಪದದ ಬಳಕೆ ರೆಕಾರ್ಡ್‌ ಆಗಿದೆಯಾ? ಆ ಪದದ ಸಮಾನಾರ್ಥಕ ಪದ ಯಾವುದು ಇದೆಯೋ ಅದೆಲ್ಲವನ್ನೂ ಬಳಸಿ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಕರ್ನಾಟಕದಲ್ಲಿ ಬಿಜೆಪಿಯ 25 ಸಂಸದರು ಇದ್ದಾರೆ. ಅಷ್ಟು ಜನ ಇದ್ದರೂ ಏನು ಯೋಜನೆ ತಂದಿದ್ದಾರೆ. ಹೀಗಾಗಿ ಬಿಜೆಪಿಯವರು ಅಯೋಗ್ಯರು ಎಂದು ಹೇಳಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ