Breaking News

ಕಟೀಲ್​ಗೆ ಟಿಕೆಟ್ ಡೌಟ್ : ಹೊಸ ಮುಖ ಕಣಕ್ಕಿಳಿಸಲು ಬಿಜೆಪಿ ಸಿದ್ದತೆ

Spread the love

ಮಂಗಳೂರು: ಮುಂಬರುವ ಲೋಕಸಭೆಯ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮುಖ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಹಾಲಿ ಸಂಸದ ನಳಿನ್‌ ಕುಮಾರ ಕಟೀಲ ಅವರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ.

ನಳಿನ ಕುಮಾರ ಬದಲಿಗೆ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರಿಗೆ ಟಿಕೆಟ್‌ ಸಿಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಆದರೆ ಈ ಬಾರಿ ಅವರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯೆತೆ ಇದೆ ಎನ್ನಲಾಗುತ್ತಿದೆ. ಕರಾವಳಿ ಬಿಜೆಪಿ ಕಾರ್ಯಕರ್ತರು ಹಾಗೂ ಸಂಘಟನೆ ಕಾರ್ಯಕರ್ತರು ಕಟೀಲ್ ಮೇಲೆ ಒಲವು ಹೊಂದಿಲ್ಲ. ಕಾರ್ಯಕರ್ತರ ಅಭಿಪ್ರಾಯವನ್ನು ಕಡೆಗಣಿಸಿ ಕಟೀಲ್​ಗೆ ಟಿಕೆಟ್ ನೀಡಿದರೆ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಾದ ಬಂಡಾಯದ ಬಿಸಿ ಲೋಕಸಭಾ ಚುನಾವಣೆಯಲ್ಲಿ ಮರುಕಳಿಸುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಸ್ವಚ್ಛತಾ ರಾಯಭಾರಿಯಾಗಿ ದೇಶದ ಗಮನ ಸೆಳೆದಿದ್ದ ಪೆರುವಾಯಿ ಗ್ರಾಪಂ ಅಧ್ಯಕ್ಷೆ ನೆಫೀಸಾ ಲೋಕಾಯುಕ್ತ ಬಲೆಗೆ

Spread the loveಬಂಟ್ವಾಳ: ಕಸ ಸಂಗ್ರಹಣಾ ವಾಹನವನ್ನು ತಾವೇ ಚಲಾಯಿಸುವ ಮೂಲಕ ಗಮನ ಸೆಳೆದು, ಕಳೆದ ವರ್ಷ ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ