Breaking News

ಬಾರ್​​ನಲ್ಲಿ ಶುರುವಾದ ಗೆಳೆಯರ ಗಲಾಟೆ ಮನೆ ಮುಂದೆ ಕೊಲೆಯಲ್ಲಿ ಅಂತ್ಯ

Spread the love

ಬೆಂಗಳೂರು, ಜನವರಿ 28: ಸ್ನೇಹಿತರ ಮಧ್ಯೆ ಶುರುವಾದ ಗಲಾಟೆಕೊಲೆಯಲ್ಲಿ ಅಂತ್ಯ ಕಂಡಿದೆ. ದರ್ಶನ್ ಕೊಲೆಯಾದ ದುರ್ದೈವಿ. ಚಂದ್ರಶೇಖರ್ ಅಲಿಯಾಸ್​​ ಪ್ರೀತಂ, ಯಶವಂತ, ಪ್ರಶಾಂತ್, ಲಂಕೇಶ್ ಮತ್ತು ದರ್ಶನ್ ಕೊಲೆ ಮಾಡಿದ ಆರೋಪಿಗಳು. ಸುಬ್ರಹ್ಮಣ್ಯಪುರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಹಾಗದರೆ ದರ್ಶನ್ ಕೊಲೆಗೆ ಕಾರಣ ಏನು?

ಜನವರಿ 24 ರಂದು ಕೊಲೆಯಾದ ದರ್ಶನ್ ದೊಡ್ಡಮ್ಮ ತನ್ನ ತಾಯಿಗೆ ಕೊಡಲು 3 ಸಾವಿರ ಹಣವನ್ನು ದರ್ಶನಗೆ ನೀಡಿದ್ದಳು. ಇದೇ ಹಣವನ್ನು ತೆಗೊಂಡು ದರ್ಶನ್​ ಸ್ನೇಹಿತ ನಿತಿನ್, ರಮೇಶ್ ಜೊತೆಗೆ ಬಾರ್​ಗೆ ಬಂದಿದ್ದನು. ಇದೇ ಬಾರ್​ಗೆ ಆರೋಪಿಗಳಾದ ಚಂದ್ರಶೇಖರ್ ಅಲಿಯಾಸ್​​ ಪ್ರೀತಂ, ಯಶವಂತ, ಪ್ರಶಾಂತ್, ಲಂಕೇಶ್ ಮತ್ತು ದರ್ಶನ್ ಬಂದಿದ್ದರು.

ಆರೋಪಿಗಳು ಮತ್ತು ದರ್ಶನ್ ಟೀಂ ಎಲ್ಲರೂ ಸ್ನೇಹಿತರೆ. ಆದರೆ ಅದೇನಾಯ್ತೊ ಏನೊ ನಿತಿನ್ ಹಾಗೂ ಪ್ರೀತಂ ನಡುವೆ ಕಿರಿಕ್ ಆಗುತ್ತೆ. ಇಷ್ಟಾದ ಮೇಲೆ ದರ್ಶನ್ ಆಯಂಡ್ ಟೀಮ್ ರಮೇಶ್ ಮನೆ ಬಳಿಗೆ ಹೋಗುತ್ತಾರೆ. ಪ್ರೀತಂ ಆಯಂಡ್​ ಗ್ಯಾಂಗ್​ ಇಲ್ಲಿಗೂ ಬರುತ್ತಾರೆ. ಈ ವೇಳೆ ನಿತಿನ್ ಹಾಗೂ ಪ್ರೀತಂ ನಡುವೆ ಗಲಾಟೆ ಆಗುತ್ತೆ. ಆಗ ನಿತಿನ್​ಗೆ ಪ್ರೀತಂ ಹೊಡೆದಿದ್ದಾನೆ.

ಈ ವೇಳೆ ದರ್ಶನ್ ಮಧ್ಯಪ್ರವೇಶಿಸಿ ನಿತಿನ್​ಗೆ ಹೊಡೆದಿದ್ದನ್ನು ಪ್ರಶ್ನಿಸಿದ್ದಾನೆ. ಆಗ ದರ್ಶನ್​ಗೆ ಪ್ರೀತಂ ಹಾಲೋಬ್ಲಾಕ್ (ಸಿಮೆಂಟ್​ ಇಟ್ಟಿಗೆ) ಯಿಂದ ಹೊಡೆದಿದ್ದಾನೆ. ಇದರಿಂದ ದರ್ಶನ್​ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಾಲ ವಾಪಸ್​ ಕೇಳಿದ್ದಕ್ಕೆ ಯುವಕನ ಮೇಲೆ ಡೆಡ್ಲಿ ಅಟ್ಯಾಕ್

ಸಾಲ ವಾಪಸ್​ ಕೇಳಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್​​​ನ ಲಗ್ಗೆರೆ ಸಮೀಪ ನಡೆದಿದೆ. ಮಾರುತಿ ಹಲ್ಲೆಗೊಳಗಾದ ಕಾರು ಚಾಲಕ. ಕೆಂಚ ಎಂಬುವ ಕಾರು ಚಾಲಕ ಮಾರುತಿ ಅವರ ಬಳಿ 25 ಸಾವಿರ ರೂ. ಸಾಲ ಪಡೆದಿದ್ದನು. ಆದರೆ ಕೆಂಚ ಸಾಲವನ್ನು ನೀಡದೆ ತಲೆ ಮರಿಸಿಕೊಂಡು ತಿರುಗಾಡುತ್ತಿದ್ದನು. ಅದೊಂದು ದಿನ ಕೆಂಚ ಕೈಗೆ ಸಿಕ್ಕಿದ್ದು, ಮಾರುತಿ ಸಾಲ ವಾಪಸ್​ ನೀಡುವಂತೆ ಹೇಳಿದ್ದಾರೆ.

ಇದರಿಂದ ಕೋಪಗೊಂಡ ಕೆಂಚ ಮತ್ತು ಆತನ ಸ್ನೇಹಿತರಾದ ತೇಜು, ನವೀನ್, ವೆಂಕಟೇಶ್, ಕೆಂಚ, ಮಯೂರ್ ತುಮಕೂರಿನ ಹೆಬ್ಬೂರಿನಿಂದ ಬರೊಬ್ಬರಿ 100 ಕಿಮೀ ಮಾರುತಿಯನ್ನು ಫಾಲೋ ಮಾಡಿಕೊಂಡು ಬಂದಿದ್ದಾರೆ. ನಂದಿನಿ ಲೇಔಟ್​​​ನ ಲಗ್ಗೆರೆ ಸಮೀಪ ಗ್ಯಾಂಗ್​ ಮಾರುತಿ ಮೇಲೆ ಲಾಂಗ್​ನಿಂದ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮಾರುತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂದಿನಿ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಆಮೆಗತಿಯ ಕಾಮಗಾರಿ…ಕೆಸರುಮಯವಾದ ರಸ್ತೆ… ಓಡಾಡಲಾಗದೇ ಎಲ್ ಆಂಡ್ ಟಿ ಗೆ ಹಿಡಿಶಾಪ ಹಾಕಿದ ಜನ!!

Spread the love ಆಮೆಗತಿಯ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ನಗರದ ಜನರು ಪ್ರತಿದಿನ ಇನ್ನಿಲ್ಲದ ಸಮಸ್ಯೆಯನ್ನು ಎದುರಿಸುತ್ತಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ