Breaking News

ಅವಕಾಶವಾದಿ ರಾಜಕೀಯ ಮಾಡುವವರ ಬಗ್ಗೆ ನಾವೇನೂ ಮಾಡಲಾಗದು: ಎಂ.ಬಿ.ಪಾಟೀಲ

Spread the love

ವಿಜಯಪುರ: ಅವಕಾಶವಾದಿ ರಾಜಕೀಯ ಮಾಡುವವರ ಬಗ್ಗೆ ನಾವೇನೂ ಮಾಡಲಾಗದು, ಇದೆಲ್ಲ ಜಗತ್ತಿನ ನಿಯಮ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಬಿಹಾರ ರಾಜಕೀಯ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೋಗುವವರು ಹೋಗುತ್ತಾರೆ, ನಾವು ನಮ್ಮ ಸಿದ್ಧಾಂತದೊಂದಿಗೆ ಮುಂದುವರೆಯುತ್ತೇವೆ.

ಇದರಿಂದ ನಾವು ಮತ್ತಷ್ಡು ಹೆಚ್ಚಿನ ರೀತಿಯಲ್ಲಿ ನಮ್ಮ ಬದ್ಧತೆಯಿಂದ ಸಿದ್ದಾಪುಗಳೊಂಡಿದೆ ಕೆಲಸ ಮಾಡಲು ಸಹಕಾರಿ ಆಗಲಿದೆ ಎಂದರು.

ಆಗಾಗ ಕಾಲಕಾಲಕ್ಕೆ ಇಂಥದ್ದನ್ನೆಲ್ಲ ನೋಡುತ್ತಿದ್ದೇವೆ. ಇಂಥದ್ದೆಲ್ಲ ಶುದ್ಧವಾಗಬೇಕಿದೆ ಎಂದರು.

ಸಚಿವ ಸತೀಶ ಜಾರಕಿಹೊಳಿ ನನ್ನ ಆತ್ಮೀಯ ಸ್ನೇಹಿತರು, ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುವುದಿಲ್ಲ. ಸತೀಶ ಬಿಜೆಪಿ ಸೇರುತ್ತಾರೆಂದು ನಿಮಗೆ ಯಾರು ಹೇಳಿದರು ಎಂದು ಪತ್ರಕರ್ತರನ್ನೇ ಪ್ರಶ್ನಿಸಿದ ಸಚಿವ ಎಂ.ಬಿ.ಪಾಟೀಲ, ಬಿಜೆಪಿ ನಾಯಕರನ್ನು ಭೇಟಿ ಮಾಡಿದ ವಿಷಯ ನನಗೆ ಗೊತ್ತಿಲ್ಲ ಎಂದರು.

ಬಿಜೆಪಿ ಪಕ್ಷದಲ್ಲೇ ಇದ್ದ ಶಾಸಕ ಜನಾರ್ಧನ ರೆಡ್ಡಿ ವಿರುದ್ದ ಗಣಿ ಹಗರಣದ ಪ್ರಕರಣ ದಾಖಲಾಗಿದ್ದವು. ಬಿಜೆಪಿ ಪಕ್ಷದಿಂದ ಹೊರಬಂದು ಮತ್ತೆ ಅಲ್ಲಿಗೆ ಮರಳುತ್ತಿರುವ ಅವರ ಕುರಿತು ನಾನು ಪ್ರತಿಕ್ರಿಯಿಸಲಾರೆ ಎಂದರು.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಆಪರೇಶನ್ ಕಮಲ ಮಾಡುವ ಮಾತಿರಲಿ, ನಾವೇ ಆಪರೇಶನ್ ಹಸ್ತ ಮಾಡುತ್ತೇವೆ. ಮಾಧ್ಯಮಗಳ ಮುಂದೆ ಎಲ್ಲವನ್ನೂ ಹೇಳಲಾಗದು. ಚುನಾವಣೆ ಹೊತ್ತಿಗೆ ಬಿಜೆಪಿ ಪಕ್ಷದ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದರು.


Spread the love

About Laxminews 24x7

Check Also

ಪ್ರಿಯತಮೆ ಹಿಂದೂ… ನಾನು ಮುಸ್ಲಿಂ ಆಗಿ ಹುಟ್ಟಿದ್ದೇ ತಪ್ಪಾ? – ಸಂಜೀತ್ ಆಲಿ ಡೆತ್ ನೋಟ್

Spread the loveಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇನಲ್ಲಿ ಯುವತಿ ಸಾಯಿ ಸುರಭಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ