Breaking News

ಅಜ್ಜನ ಜಾತ್ರೆಯ ಸಮಾರೋಪ

Spread the love

ಕೊಪ್ಪಳ: ಗವಿಮಠ ಜಾತ್ರೆಯ ಸಮಾರೋಪ ಸಮಾರಂಭ ಸೋಮವಾರ ನಡೆಯಲಿದ್ದು, ಕೊನೆಯ ದಿನ ವಿವಿಧ ಕಾರ್ಯಕ್ರಮಗಳು ಜರುಗಲಿವೆ.

ಬೆಳಿಗ್ಗೆ 10 ಗಂಟೆಗೆ ಮಠದ ಆವರಣದಲ್ಲಿ ಪುರುಷರ ಹಾಗೂ ಮಹಿಳೆಯರ ಆಹ್ವಾನಿತ ಕಬಡ್ಡಿ ಟೂರ್ನಿ ಜರುಗಲಿದೆ. 11ರಿಂದ ಮಧ್ಯಾಹ್ನ 1.30ರ ತನಕ ಶಾಂತವನ ಯಾತ್ರಿ ನಿವಾಸ ರಸ್ತೆಯಲ್ಲಿ ಆನ್ವೇಷಣೆ ಆತ್ಮಚಿಂತನೆ ಆಯೋಜನೆಯಾಗಿದೆ.

 

ಸಂಜೆ 5.30ಕ್ಕೆ ಕೈಲಾಸ ಮಂಟಪದಲ್ಲಿ ನಡೆಯುವ ಸಮಾರೋಪದಲ್ಲಿ ಶಿವಗಂಗಾಕ್ಷೇತ್ರದ ಮೇಲಣಗವಿ ವೀರಸಿಂಹಾಸನ ಸಂಸ್ಥಾನಮಠದ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಪರಿಸರ ಮತ್ತು ವನ್ಯಜೀವಿ ಛಾಯಾಗ್ರಾಹಕ ಕೃಪಾಕರ ಮತ್ತು ಸೇನಾನಿ ಪಾಲ್ಗೊಳ್ಳುವರು. ಕನ್ನಡ ಚಲನಚಿತ್ರ ನಟ ದೊಡ್ಡಣ್ಣ ಸಮಾರೋಪ ನುಡಿಗಳನ್ನು ಆಡಲಿದ್ದಾರೆ.

ಸಂಗೀತ ಕಾರ್ಯಕ್ರಮದಲ್ಲಿ ಉಡುಪಿಯ ಬಳಗದ ಕಲಾಸಿಂಧು ಕಲಾವತಿ ದಯಾನಂದ ಸಂಗೀತ ಕಾರ್ಯಕ್ರಮ ನೀಡುವರು. ರಾತ್ರಿ 10 ಗಂಟೆಗೆ ಬಿ. ಪ್ರಾಣೇಶ್ ಹಾಸ್ಯೋತ್ಸವ ನಡೆಸಿಕೊಡುವರು.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ