Breaking News
Home / Uncategorized / ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಕೆಟಿಗ ಮಯಾಂಕ್ ಅಗರ್ವಾಲ್‌ ತ್ರಿಪುರಾದಿಂದ ಬೆಂಗಳೂರಿಗೆ ಶಿಫ್ಟ್

ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಕೆಟಿಗ ಮಯಾಂಕ್ ಅಗರ್ವಾಲ್‌ ತ್ರಿಪುರಾದಿಂದ ಬೆಂಗಳೂರಿಗೆ ಶಿಫ್ಟ್

Spread the love

ತ್ರಿಪುರಾದಿಂದ 6E525 ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನಲ್ಲೇ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮಯಾಂಕ್ ಅಗರ್ವಾಲ್ ಆರೋಗ್ಯದ ಬಗ್ಗೆ ಕರ್ನಾಟಕ ಕ್ರಿಕೆಟ್‌ ತಂಡದ ಮ್ಯಾನೇಜರ್ ರಮೇಶ್ ಪ್ರತಿಕ್ರಿಯಿಸಿದ್ದು, ಮಯಾಂಕ್ ಅರ್ಗವಾಲ್ ಅವರು ಅಪಾಯದಿಂದ ಪಾರಾಗಿದ್ದಾರೆ. ವಿಮಾನ ನಿಲ್ದಾಣದಿಂದ ಮನೆಗೆ ತೆರಳುತ್ತಿದ್ದು, ನಾಳೆ (ಫೆಬ್ರವರಿ 01) ಬೆಂಗಳೂರಿನಲ್ಲಿ ವೈದ್ಯರನ್ನ ಸಂಪರ್ಕಿಸಲಿದ್ದಾರೆ. ಥ್ರೋಟ್ ಇನ್ಪೇಕ್ಷನ್ ಆಗಿರುವ ಕಾರಣ ಅವರಿಗೆ ಮಾತನಾಡಲು ಆಗುತ್ತಿಲ್ಲ ಎಂದು ಮಾಹಿತಿ ನೀಡಿದರು.

 

ತ್ರಿಪುರಾದಿಂದ ಸೂರತ್ ಗೆ ಹೋಗುವಾಗ ವಿಮಾನದಲ್ಲಿ ನೀರು ಕುಡಿದ ಪರಿಣಾಮ ತೊಂದರೆಯಾಯ್ತು. ಕೂಡಲೇ ಅವರಿಗೆ ಸೂಕ್ತ ಚಿಕಿತ್ಸೆ ಕೂಡಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ತನಿಖೆ ನಂತರ ಏನಾಗಿತ್ತು ಎನ್ನುವುದು ಗೊತ್ತಾಗಲಿದೆ ಎಂದು ಸ್ಪಷ್ಟಪಡಿಸಿದರು


Spread the love

About Laxminews 24x7

Check Also

ಜುಲೈ 1 ರಿಂದ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಗಳ ಬೆಲೆ ಏರಿಕೆ ಘೋಷಿಸಿದ ಹೀರೋ ಮೋಟೊಕಾರ್ಪ್

Spread the love ನವದೆಹಲಿ:ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕರಲ್ಲಿ ಒಬ್ಬರಾದ ಹೀರೋ ಮೋಟೊಕಾರ್ಪ್ ಜುಲೈ 1, 2024 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ