Breaking News

ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಕೆಟಿಗ ಮಯಾಂಕ್ ಅಗರ್ವಾಲ್‌ ತ್ರಿಪುರಾದಿಂದ ಬೆಂಗಳೂರಿಗೆ ಶಿಫ್ಟ್

Spread the love

ತ್ರಿಪುರಾದಿಂದ 6E525 ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನಲ್ಲೇ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮಯಾಂಕ್ ಅಗರ್ವಾಲ್ ಆರೋಗ್ಯದ ಬಗ್ಗೆ ಕರ್ನಾಟಕ ಕ್ರಿಕೆಟ್‌ ತಂಡದ ಮ್ಯಾನೇಜರ್ ರಮೇಶ್ ಪ್ರತಿಕ್ರಿಯಿಸಿದ್ದು, ಮಯಾಂಕ್ ಅರ್ಗವಾಲ್ ಅವರು ಅಪಾಯದಿಂದ ಪಾರಾಗಿದ್ದಾರೆ. ವಿಮಾನ ನಿಲ್ದಾಣದಿಂದ ಮನೆಗೆ ತೆರಳುತ್ತಿದ್ದು, ನಾಳೆ (ಫೆಬ್ರವರಿ 01) ಬೆಂಗಳೂರಿನಲ್ಲಿ ವೈದ್ಯರನ್ನ ಸಂಪರ್ಕಿಸಲಿದ್ದಾರೆ. ಥ್ರೋಟ್ ಇನ್ಪೇಕ್ಷನ್ ಆಗಿರುವ ಕಾರಣ ಅವರಿಗೆ ಮಾತನಾಡಲು ಆಗುತ್ತಿಲ್ಲ ಎಂದು ಮಾಹಿತಿ ನೀಡಿದರು.

 

ತ್ರಿಪುರಾದಿಂದ ಸೂರತ್ ಗೆ ಹೋಗುವಾಗ ವಿಮಾನದಲ್ಲಿ ನೀರು ಕುಡಿದ ಪರಿಣಾಮ ತೊಂದರೆಯಾಯ್ತು. ಕೂಡಲೇ ಅವರಿಗೆ ಸೂಕ್ತ ಚಿಕಿತ್ಸೆ ಕೂಡಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ತನಿಖೆ ನಂತರ ಏನಾಗಿತ್ತು ಎನ್ನುವುದು ಗೊತ್ತಾಗಲಿದೆ ಎಂದು ಸ್ಪಷ್ಟಪಡಿಸಿದರು


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ