ಹುಬ್ಬಳ್ಳಿ, ಫೆಬ್ರುವರಿ 1: ಧಾರವಾಡದ ಬಣ ರಾಜಕೀಯವನ್ನು ಶಮನ ಮಾಡಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra)ಮುಂದಾಗಿದ್ದಾರೆ. ಆ ಮೂಲಕ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮತ್ತು ವಿಧಾನಸಭಾ ಉಪನಾಯಕ ಅರವಿಂದ ಬೆಲ್ಲದ್ ಅವರೊಂದಿಗೆ ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಪ್ರತ್ಯೇಕ ಸಭೆ ಮಾಡಿದ್ದಾರೆ. ಮೂವರು ನಾಯಕರೊಂದಿಗೆ ಬಿ.ವೈ.ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಧಾರಾವಾಡ ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಘರವಾಪ್ಸಿಯಾದರೂ ಭಿನ್ನಮತವಿತ್ತು. ಶೆಟ್ಟರ್ ಮೆರವಣಿಗೆಯಲ್ಲೂ ಸ್ಥಳೀಯ ನಾಯಕರು ಭಾಗಿಯಾಗಿರಲಿಲ್ಲ.
ಹೀಗಾಗಿ ಬಣ ರಾಜಕೀಯವನ್ನು ಶಮನ ಮಾಡಲು ಸಭೆ ಮಾಡಿದ್ದಾರೆ.
ನಮ್ಮ ಮುಂದೆ ಇರುವ ದೊಡ್ಡ ಸವಾಲು ಲೋಕಸಭೆ ಚುನಾವಣೆ: ಬಿ.ವೈ.ವಿಜಯೇಂದ್ರ
ಬಳಿಕ ಮಾತನಾಡಿದ ಅವರು, ನಮ್ಮ ಮುಂದೆ ಇರುವ ದೊಡ್ಡ ಸವಾಲು ಲೋಕಸಭೆ ಚುನಾವಣೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲಾಗಿದೆ. ಕಾಂಗ್ರೆಸ್ ಎಂಪಿ ಚುನಾವಣೆಯಲ್ಲಿ ಗೆಲ್ತೇವೆ ಅನ್ನೋ ಭ್ರಮೆಯಲ್ಲಿದೆ. ಪಂಚರಾಜ್ಯಗಳ ಚುನಾವಣೆ ಕಾಂಗ್ರೆಸ್ನವರಿಗೆ ಆಘಾತ ನೀಡಿದೆ. ಕಳೆದ ಕೆಲ ತಿಂಗಳಿಂದ ರಾಜ್ಯದಲ್ಲಿ ಅನೇಕ ಬದಲಾವಣೆ ಆಗಿದೆ. ಅನುದಾನ ಕೊಡದ ಸರ್ಕಾರ ಇದು ಎಂದು ಕಿಡಿಕಾರಿದ್ದಾ