ಅದರ ಝಲಕ್ ಇಲ್ಲಿದೆ.ಹಲಗೆ ಬಾರಿಸುತ್ತಾ ಜಟ್ಟಿಗಳಿಗೆ ಹುರುಪು ನೀಡುತ್ತಿರುವ ಹಲಗೆ ಮೇಳ ಕಲಾವಿದರು.ಮಣ್ಣಿನ ಅಖಾಡದಲ್ಲಿ ಎದುರಾಳಿಯನ್ನು ಎತ್ತಿ ನೆಲಕ್ಕೆ ಬಡಿಯುವ ಮಲ್ಲರು. ಕೊಬ್ಬಿದ ಗೂಳಿಯಂತೆ, ಮದಗಜಗಳಂತೆ ಜಟ್ಟಿಗಳ ಕಾದಾಟ. ಮಲ್ಲರ ಯುದ್ದ ಕಂಡು ಜನರ ಕೇಕೆ ಚಪ್ಪಾಳೆ. ಈ ದೃಶ್ಯ ಕಂಡುಬಂದಿದ್ದು ಬಾಗಲಕೋಟೆ ತಾಲ್ಲೂಕಿನ ತುಳಸಿಗೇರಿ ಗ್ರಾಮದಲ್ಲಿ.
ತುಳಸಿಗೇರಿಯಲ್ಲಿ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆ ಆಯೋಜನೆ ಮಾಡಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಆಂದ್ರ, ತಮಿಳುನಾಡು ಮೂಲದಿಂದಲೂ ಕುಸ್ತಿ ಆಡುವುದಕ್ಕೆ ಮಲ್ಲರು ಆಗಮಿಸಿದ್ದರು. ಮಣ್ಣಿನ ಅಖಾಡದಲ್ಲಿ ಜಟ್ಟಿಗಳು ತೊಡೆ ತಟ್ಟಿ ಸೆಣಸಾಟ ನಡೆಸುತ್ತಿರುವುದು ನೋಡುಗರನ್ನು ರೋಮಾಂಚನಗೊಳಿಸಿತು.
Laxmi News 24×7